Advertisement

ಸ್ಥಳೀಯ ಈರುಳ್ಳಿ ಮಾರಾಟಕ್ಕೆ ಆದ್ಯತೆ ನೀಡಿ: ಹಿರೇಮಠ

03:54 PM May 03, 2020 | Suhan S |

ಗದಗ: ಜಿಲ್ಲೆಯ ಎಪಿಎಂಸಿಯಲ್ಲಿ ಹೊರ ರಾಜ್ಯಗಳಿಂದ ಬರುತ್ತಿರುವ ಈರುಳ್ಳಿಯಿಂದಾಗಿ ಸ್ಥಳೀಯ ರೈತರು ಬೆಳೆದ ಈರುಳ್ಳಿಗೆ ಯೋಗ್ಯ ದರ ದೊರೆಯುತ್ತಿಲ್ಲ. ಈಗಾಗಲೇ ಜಿಲ್ಲೆಯ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿದ್ದಾರೆ. ವರ್ತಕರು ಜಿಲ್ಲೆಯ ರೈತರು ಬೆಳೆದ ಈರುಳ್ಳಿಯನ್ನು ಯೋಗ್ಯ ಬೆಲೆಗೆ ಖರೀದಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚಿಸಿದರು.

Advertisement

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಅಧಿಕಾರಿಗಳು ಹಾಗೂ ವರ್ತಕರೊಂದಿಗೆ ಸಭೆ ನಡೆಸಿದ ಅವರು, ನಾನಾ ಕಾರಣಗಳಿಂದಾಗಿ ಜಿಲ್ಲೆಗೆ ಹೊರ ರಾಜ್ಯದಿಂದ ಈರುಳ್ಳಿ ಬರುತ್ತಿದೆ. ಸ್ಥಳೀಯವಾಗಿ ಈರುಳ್ಳಿ ಬೆಳೆದ ರೈತರಿಗೆ ಸೂಕ್ತವಾದ ಬೆಲೆ ದೊರೆಯ‌ದಂತಾಗಿದೆ. ಯಾವುದೇ ಕಾರಣಕ್ಕೂ ವ್ಯಾಪಾರಸ್ಥರು ಹೊರ ರಾಜ್ಯದ ಈರುಳ್ಳಿ ಖರೀದಿಸದೇ, ಸ್ಥಳೀಯ ರೈತರ ಬೆಳೆಯನ್ನು ಯೋಗ್ಯ ಬೆಲೆ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಮಾತನಾಡಿ, ಜಿಲ್ಲೆಯಲ್ಲಿ 600 ಹೆಕ್ಟೇರ್‌ನಲ್ಲಿ ಅಂದಾಜು 10ಸಾವಿರ ಮೆಟ್ರಿಕ್‌ ಟನ್‌ ಈರುಳ್ಳಿ ಉತ್ಪಾದನೆ ಆಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಎಲ್‌. ಲಮಾಣಿ, ಗದಗ ಎಪಿಎಂಸಿಯ ಸಹಾಯಕ ಕಾರ್ಯದರ್ಶಿ ಎಂ.ಆರ್‌. ನದಾಫ್‌ ಹಾಗೂ ಎಪಿಎಂಸಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next