Advertisement

ರಸ್ತೆಯ ಕೊರತೆ: ತುಂಬು ಗರ್ಭಿಣಿಯನ್ನು ನದಿಯ ಮೂಲಕ ಬುಟ್ಟಿಯಲ್ಲಿ ಹೊತ್ತು ಸಾಗಿದ ಕುಟುಂಬಸ್ಥರು

02:12 PM Aug 02, 2020 | Mithun PG |

ಛತ್ತಿಸ್ ಗಢ: ಸಮರ್ಪಕ ರಸ್ತೆ ಸಂಪರ್ಕದ ಕೊರತೆಯಿಂದ ಆ್ಯಂಬುಲೆನ್ಸ್ ಗ್ರಾಮವನ್ನು ತಲುಪಲು ಸಾಧ್ಯವಾಗದೇ ಗರ್ಭಿಣಿ ಮಹಿಳೆಯನ್ನು ನದಿಯ ಮೂಲಕ ಬುಟ್ಟಿಯಲ್ಲಿ ಹೊತ್ತುಕೊಂಡು ಸಾಗಿದ ಘಟನೆ ಸುರ್ಗುಜಾದ ಕಡ್ನಾಯಿ ಗ್ರಾಮದಲ್ಲಿ ನಡೆದಿದೆ.

Advertisement

ಈ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ನದಿಗಳು ತುಂಬಿ ಹರಿಯುತ್ತಿದೆ. ಇದರ ಮಧ್ಯೆಯೇ ನಾಲ್ವರು ಪುರುಷರು ತುಂಬು ಗರ್ಭಿಣಿ ಮಹಿಳೆಯನ್ನು ಬುಟ್ಟಿಯಲ್ಲಿ ಕುಳ್ಳಿರಿಸಿ ಎತ್ತಿಕೊಂಡು ಸಾಗಿದ್ದಾರೆ. ಮಾತ್ರವಲ್ಲದೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದೀಗ ಈ ವಿಡಿಯೋ ವ್ಯಾಪಕ ವೈರಲ್ ಆಗಿದ್ದು ಹಲವರು ಸ್ಥಳೀಯಾಡಳಿತ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. ಮಾತ್ರವಲ್ಲದೆ ಕುಗ್ರಾಮಗಳಿಗೆ ಮೌಲಸೌಕರ್ಯ ಒದಗಿಸಲು ಆಗ್ರಹಿಸಿದ್ದಾರೆ.

ಕುಗ್ರಾಮದ ಜನರು ಮಳೆಗಾಲದ ಸಂದರ್ಭದಲ್ಲಿ ಇಂತಹ ಸಂಕಷ್ಟಗಳನ್ನು ಎದುರಿಸುತ್ತಾರೆ. ಆದರೇ ಜಿಲ್ಲೆಯಲ್ಲಿ ಸಮರ್ಪಕ ಆರೋಗ್ಯ ಮೂಲ ಸೌಕರ್ಯಗಳು ಇವೆ. ಜನತೆಯನ್ನು ಈ ಸಮಸ್ಯೆಗಳಿಂದ ದೂರ ಮಾಡಲು ಸಣ್ಣ ಸಣ್ಣ ಕಾರುಗಳನ್ನು ನಿಯೋಜಿಸಲು ಯೋಜನೆ ರೂಪಿಸಲಾಗುತ್ತಿದೆ. ಮಾತ್ರವಲ್ಲದೆ ಅಗತ್ಯ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಜಯ್ ಕುಮಾರ್ ಝಾ ತಿಳಿಸಿದ್ದಾರೆ.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next