Advertisement

ಸಾಲ ವಸೂಲಿ; ಗರ್ಭಿಣಿ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆಗೈದ ಫೈನಾನ್ಸ್ ಕಂಪನಿ ಅಧಿಕಾರಿಗಳು

01:05 PM Sep 17, 2022 | Team Udayavani |

ರಾಂಚಿ: ಸಾಲ ವಸೂಲಿಗಾಗಿ ಟ್ರ್ಯಾಕ್ಟರ್ ವಶಪಡಿಸಿಕೊಳ್ಳಲು ಬಂದಿದ್ದ ಫೈನಾನ್ಸ್ ಕಂಪನಿಯ ಅಧಿಕಾರಿಗಳು ಗರ್ಭಿಣಿ ಮಹಿಳೆಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆಗೈದಿರುವ ಭೀಬತ್ಸ ಘಟನೆ ಜಾರ್ಖಂಡ್ ನ ಹಝಾರಿಬಾಗ್ ನಲ್ಲಿ ಶುಕ್ರವಾರ(ಸೆ.16) ನಡೆದಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಆಗಿನ ನಿರ್ಮಾಪಕರು ನನ್ನಿಂದ ಬಯಸುತ್ತಿದ್ದದ್ದು ಅದನ್ನು ಮಾತ್ರ: ಕರಾಳ ಅನುಭವ ಬಿಚ್ಚಿಟ್ಟ ನಟಿ

ಜನಪ್ರಿಯ ಫೈನಾನ್ಸ್ ಕಂಪನಿಯ ಅಧಿಕಾರಿಗಳು ಯಾವುದೇ ಮಾಹಿತಿ ನೀಡದೆ ಸಾಲ ವಸೂಲಿಗಾಗಿ ಟ್ರ್ಯಾಕ್ಟರ್ ವಶಪಡಿಸಿಕೊಳ್ಳಲು ರೈತನ ಮನೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ರೈತನ ಮಗಳ ನಡುವೆ ವಾಕ್ಸಮರ ನಡೆದಿತ್ತು. ನಂತರ ಈಕೆ ಟ್ರ್ಯಾಕ್ಟರ್ ಮುಂಭಾಗಕ್ಕೆ ಬಂದು ಅಡ್ಡಗಟ್ಟಿರುವುದಾಗಿ ವರದಿ ವಿವರಿಸಿದೆ.

ಆಗ ಅಧಿಕಾರಿಗಳು ಗರ್ಭಿಣಿ ಮಹಿಳೆ ಮೇಲೆ ಟ್ರ್ಯಾಕ್ಟರ್ ಹತ್ತಿಸಿದ್ದು, ಕೂಡಲೇ ಸಂಬಂಧಿಕರು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಕೆ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಫೈನಾನ್ಸ್ ಕಂಪನಿಯ ಅಧಿಕಾರಿಗಳ ಮೇಲೆ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಝಾರಿಬಾಗ್ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತಜ್ ಚೋಟೆ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next