Advertisement

ಪ್ರೇಮಲತಾಗೆ ಕ್ಲೀನ್ ಚಿಟ್; ರಾಘವೇಶ್ವರ ಶ್ರೀಗೆ ಬ್ಲ್ಯಾಕ್ ಮೇಲ್ ಕೇಸ್

02:27 PM Feb 22, 2017 | Sharanya Alva |

ಬೆಂಗಳೂರು:ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧದ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಕಿ ಪ್ರೇಮಲತಾ ದಂಪತಿಗೆ ಸಿಐಡಿ ಬುಧವಾರ ಕ್ಲೀನ್ ಚಿಟ್ ನೀಡಿದೆ.

Advertisement

ರಾಘವೇಶ್ವರ ಶ್ರೀಗಳಿಗೆ ರಾಮಚಂದ್ರಾಪುರ ಮಠದಲ್ಲಿ ರಾಮಕಥಾ ಗಾಯಕಿಯಾಗಿದ್ದ ಪ್ರೇಮಲತಾ ಹಾಗೂ ಪತಿ ದಿವಾಕರ್ ಅವರು ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ಆರೋಪಿಸಿ 2014ರ ಆ.26ರಂದು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಸಾಕ್ಷ್ಯಾಧಾರದ ಕೊರತೆ ಹಿನ್ನೆಲೆಯಲ್ಲಿ ಪ್ರೇಮಲತಾ ಹಾಗೂ ಇತರರ ವಿರುದ್ಧ ಹೊನ್ನಾವರ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next