Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ

11:40 AM Jun 20, 2020 | Suhan S |

ಯಲ್ಲಾಪುರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಇಲಾಖೆಯಿಂದ ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ಆತಂಕಕ್ಕೆ ಒಳಗಾಗದೇ ಮಕ್ಕಳು ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗುವುದೆಂದು ಬಿಇಒ ಎನ್‌. ಆರ್‌. ಹೆಗಡೆ ಹೇಳಿದರು.

Advertisement

ಪಟ್ಟಣದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ತಾಲೂಕಿನಲ್ಲಿ ನಾಲ್ಕು ಕೇಂದ್ರಗಳಲ್ಲಿ ಒಟ್ಟೂ 1,024 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳ ಪ್ರಯಾಣಕ್ಕೆಂದು 8 ಮಾರ್ಗಗಳಲ್ಲಿ ಬಸ್‌ ವ್ಯವಸ್ಥೆ ಮಾಡಲಾಗಿದೆ. ಕೇಂದ್ರದ ಹೊರ ಭಾಗದಲ್ಲಿ ಮೂರು ಅಡಿಗೊಂದರಂತೆ ಮಾರ್ಕ್‌ ಮಾಡಲಾಗಿದ್ದು, ವಿದ್ಯಾರ್ಥಿಗಳು ಪರಸ್ಪರ ಅಂತರ ಕಾಯ್ದುಕೊಳ್ಳಲು ಅನುಕೂಲವಾಗಲಿದೆ.

ಮೂರು ದಿನ ಮೊದಲೇ ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿಗಳನ್ನು ಸ್ಯಾನಿಟೈಜೇಷನ್‌ ಮಾಡಲಾಗುವುದು. ಕೇಂದ್ರಕ್ಕೆ ಪ್ರವೇಶಿಸುವಾಗ ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡುವ ಜತೆಗೆ ಮಾಸ್ಕ್, ಸ್ಯಾನಿಟೈಸರ್‌ ನೀಡಲಾಗುವುದೆಂದರು. ಪರೀಕ್ಷಾ ಕೇಂದ್ರದ ಆವಾರದೊಳಗೆ ಪಾಲಕರಿಗೆ ಪ್ರವೇಶವಿರುವುದಿಲ್ಲ. ವಿದ್ಯಾರ್ಥಿಗಳಿಗೆ ಅನಾರೋಗ್ಯ ಉಂಟಾಗಿದ್ದರೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಕೊಠಡಿ ಕಾಯ್ದಿರಿಸಲಾಗಿದೆ. ಯಾವುದೇ ಭಯವಿಲ್ಲದೇ ಪಾಲಕರು ಮಕ್ಕಳನ್ನು ಪರೀಕ್ಷೆಗೆ ಕಳಿಸಬೇಕು ಎಂದರು. ಮುಕ್ತಾ ಶಂಕರ, ರವೀಂದ್ರ ಕಾಪ್ಸೆ ಹಾಗೂ ಶಿಕ್ಷಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next