Advertisement

ಹಾಲಿ, ಮಾಜಿ ಆಯುಕ್ತರ ವಿಚಾರಣೆ ಸಾಧ್ಯತೆ

12:05 AM Sep 29, 2019 | Team Udayavani |

ಬೆಂಗಳೂರು: ರಾಜ್ಯದ ಹಲವು ರಾಜಕಾರಣಿಗಳು, ಪೊಲೀಸ್‌ ಅಧಿಕಾರಿಗಳು, ಮಠಾಧೀಶರ ಫೋನ್‌ ಕರೆಗಳ ಕದ್ದಾಲಿಕೆ ಮಾಡಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ, ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಹಾಗೂ ಹಿಂದಿನ ಪೊಲೀಸ್‌ ಆಯುಕ್ತ ಟಿ.ಸುನೀಲ್‌ಕುಮಾರ್‌ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

Advertisement

ಟಿ.ಸುನೀಲ್‌ ಕುಮಾರ್‌ ಅವರ ಅಧಿಕಾರ ಅವಧಿಗೂ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಯುತ್ತಿದೆ. ಜತೆಗೆ, ಹಾಲಿ ಆಯುಕ್ತ ಭಾಸ್ಕರ್‌ ರಾವ್‌ ಅವರ ಫೋನ್‌ ಕದ್ದಾಲಿಕೆ ನಡೆದಿದೆ ಎಂಬ ವಿಚಾರವೂ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರೂ ಅಧಿಕಾರಿಗಳನ್ನು ವಿಚಾರಣೆಗೆ ಕರೆಸಿ ಮಾಹಿತಿ ಪಡೆದುಕೊಳ್ಳಲು ಸಿಬಿಐ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಗಳ ನಡುವೆಯೇ “ಸಿಬಿಐ ಅಧಿಕಾರಿಗಳು ವಿಚಾರಣೆಗೆ ಕರೆದರೆ ಹಾಜರಾಗುವೆ’ ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ತಿಳಿಸಿದ್ದಾರೆ. ಶನಿವಾರ ಈ ಕುರಿತು ಪತ್ರಕರ್ತರ ಜತೆ ಮಾತನಾಡಿದ ಅವರು, “ಇದುವರೆಗೂ ನನಗೆ ಯಾವುದೇ ನೋಟಿಸ್‌ ಬಂದಿಲ್ಲ. ನೋಟಿಸ್‌ ಬಂದರೆ ವಿಚಾರಣೆಗೆ ಹೋಗುತ್ತೇನೆ’ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next