Advertisement

ಪೀರಪಾಷಾ ಬಂಗಲೆಯಲ್ಲಿರುವ ಮಂಟಪ ಸಂರಕ್ಷಿಸಿ :ಸಿಎಂ ಭೇಟಿಯಾದ ಮಠಾಧೀಶರು

08:07 PM Jun 05, 2022 | Team Udayavani |

ಬೆಂಗಳೂರು: ಬಸವಕಲ್ಯಾಣದಲ್ಲಿರುವ ಪೀರ್ ಪಾಷಾ ದರ್ಗಾದಲ್ಲಿರುವ ಮಂಟಪವನ್ನ ಸಂರಕ್ಷಣೆ ಮಾಡಬೇಕು ಎಂದು ವೀರಶೈವ ಲಿಂಗಾಯತ ಮಠಾಧೀಶರ ನಿಯೋಗ ಭಾನುವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

Advertisement

ಸಿಎಂ ರೇಸ್ ಕೋರ್ಸ್ ನ ಸರ್ಕಾರಿ ನಿವಾಸದಲ್ಲಿ ಭೇಟಿಯಾದ 20ಕ್ಕೂ ಹೆಚ್ಚು ಮಠಾಧೀಶರ ನಿಯೋಗ, ಕುರುಹು ಪತ್ತೆಯಾದ ಜಾಗ ಸುಪರ್ದಿಗೆ ಪಡೆದು ಸಂರಕ್ಷಣೆ ಮಾಡಲು ಒತ್ತಾಯಿಸಿದ್ದಾರೆ. ಆ ಸ್ಥಳ ಸುಪರ್ದಿಗೆ ಪಡೆಯದಿದ್ದಲ್ಲಿ ಸ್ವಾಮೀಜಿಗಳ ನಡಿಗೆ ಅನುಭವ ಮಂಟಪದ ಕಡೆಗೆ ಹೆಸರಿನಲ್ಲಿ ಬೃಹತ್ ಪಾದಯಾತ್ರೆ ನಡೆಸುವುದಾಗಿ ಸ್ವಾಮೀಜಿಗಳು ತಿಳಿಸಿದ್ದಾರೆ.

ಸಿಎಂ ಭೇಟಿ ಬಳಿಕ ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಮಾತನಾಡಿ, ಸಿಎಂ ಭೇಟಿಯಾಗಿ ಬಸವಕಲ್ಯಾಣ ಮಂಟದ ಬಗ್ಗೆ ಮಾಹಿತಿ ನೀಡಿದ್ದೇವೆ. ಮೂಲ ಅನುಭವದ ಮಂಟಪ‌ ಇರುವ ಬಗ್ಗೆಯೂ ದಾಖಲೆ ಕೊಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ‌ ಕೂಡ ಸಂಪೂರ್ಣವಾಗಿ ಸಮಾಲೋಚನೆ ಮಾಡಲಿದ್ದಾರೆ ಎಂದರು.

ಜೂನ್ 12ಕ್ಕೆ‌ ಪಾದಯಾತ್ರೆ ಮಾಡುವ ವಿಚಾರದ ಕುರಿತು, ಈ ಬಗ್ಗೆ ನಾಳೆ ನಡೆಯುವ ಚಿಂತನ ಮಂಥನ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ.ಪುರಾತತ್ವ ಇಲಾಖೆ ಜೊತೆಗೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಪುರಾತತ್ವ ಇಲಾಖೆ ಬಳಿ ವರದಿ ತರಿಸಿಕೊಂಡು ಮುಂದಿನ ತೀರ್ಮಾನ ಮಾಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next