Advertisement

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

09:54 AM May 02, 2024 | Team Udayavani |

ಅಯೋಧ್ಯೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊದಲ ಬಾರಿಗೆ ಅಯೋಧ್ಯೆ ಯಲ್ಲಿನ ನೂತನ ರಾಮ ಮಂದಿರಕ್ಕೆ ಬುಧವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದ್ದಾರೆ. ಈ ಸಂದರ್ಭದಲ್ಲಿ ಅವರು, ಬಾಲಕ ರಾಮನಿಗೆ ವಿಶೇಷ ಆರತಿಯನ್ನೂ ಮಾಡಿದ್ದಾರೆ.

Advertisement

ಹೊಸದಿಲ್ಲಿಯಿಂದ ವಿಶೇಷ ವಿಮಾನ ದಲ್ಲಿ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿ ಬೆನ್‌ ಪಟೇಲ್‌ ಅವರು ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ರಾಮ ಮಂದಿರಕ್ಕೆ ಭೇಟಿ ನೀಡುವ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಹನುಮಾನ್‌ ಗಢಿ
ದೇಗುಲಕ್ಕೆ ತೆರಳಿದ್ದರು.

ಅನಂತರ ಸರಯೂ ನದಿ ತೀರಕ್ಕೆ ತೆರಳಿ ವಿಶೇಷ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

 

Advertisement

Advertisement

Udayavani is now on Telegram. Click here to join our channel and stay updated with the latest news.

Next