Advertisement

ಪುರಿ ದೇಗುಲಕ್ಕೆ 2 ಕಿ.ಮೀ. ನಡೆದೇ ಬಂದ ರಾಷ್ಟ್ರಪತಿ ದ್ರೌಪದಿ

07:13 PM Nov 10, 2022 | Team Udayavani |

ಪುರಿ: ದ್ರೌಪದಿ ಮುರ್ಮು ಅವರು ಹಮ್ಮು ಬಿಮ್ಮು ಇಲ್ಲದ ರಾಷ್ಟ್ರಪತಿ ಎಂಬುದನ್ನು ಸಾಬೀತು ಮಾಡಿದ್ದಾರೆ. ದೇಶದ ಅತ್ಯುನ್ನತ ಹುದ್ದೆಗೆ ಏರಿದ ಬಳಿಕ ಮೊದಲ ಬಾರಿಗೆ ಒಡಿಶಾಕ್ಕೆ ಭೇಟಿ ನೀಡಿರುವ ಅವರು ಪುರಿ ಜಗನ್ನಾಥ ದೇಗುಲಕ್ಕೆ ಗುರುವಾರ ಭೇಟಿ  ನೀಡಿದ್ದಾರೆ.

Advertisement

ವಿಶೇಷವೆಂದರೆ, ಅವರು ಎರಡು ಕಿಮೀ ನಡೆದುಕೊಂಡು ಬಂದು ದೇಗುಲದಲ್ಲಿ ವಿಶೇಷ ಪೂಜೆ-ಪ್ರಾರ್ಥನೆ ಸಲ್ಲಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ರಾಷ್ಟ್ರಪತಿಗಳ ಜತೆಗೆ ಇದ್ದರು. ದ್ರೌಪದಿ ಮುರ್ಮು ಅವರು ಒಟ್ಟು 2 ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಭುವನೇಶ್ವರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಸ್ವಾಗತಿಸಿದ್ದರು.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next