Advertisement

ಅಟಲ್‌ ಬಿಹಾರಿ ವಾಜಪೇಯಿ ಸ್ಮಾರಕಕ್ಕೆ ಗಣ್ಯರಿಂದ ಗೌರವ

08:29 PM Aug 16, 2022 | Team Udayavani |

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಅವರ ನಾಲ್ಕನೇ ಪುಣ್ಯಸ್ಮರಣೆಯ ದಿನವಾದ ಮಂಗಳವಾರ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ಗಣ್ಯರು ವಾಜಪೇಯಿ ಅವರಿಗೆ ಗೌರವ ಅರ್ಪಿಸಿದ್ದಾರೆ.

Advertisement

ನವದೆಹಲಿಯಲ್ಲಿರುವ ಸದೈವ್‌ ಅಟಲ್‌ ಸ್ಮಾರಕದಲ್ಲಿ ಪುಷ್ಪನಮನ ಸಲ್ಲಿಸಲಾಯಿತು. “ದೇಶದ ಸೇವೆಗಾಗಿ ಅಟಲ್‌ ಅವರ ಪ್ರಯತ್ನವು ಎಂದೆಂದಿಗೂ ನಮಗೆ ಸ್ಫೂರ್ತಿದಾಯಕ.

ದೇಶವನ್ನು ಅಭಿವೃದ್ಧಿಪಡಿಸಿ, 21ನೇ ಶತಮಾನದ ಸವಾಲುಗಳನ್ನು ಎದುರಿಸಲು ಸಜ್ಜಾಗುವಂತೆ ಮಾಡಲು ಅವರು ಅದ್ಭುತ ಪ್ರಯತ್ನ ಮಾಡಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next