Advertisement

ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ರಾಜ್ಯಾಧ್ಯಕ್ಷ ಕಟೀಲ್ ಶಾಕ್

02:11 PM Jan 25, 2022 | Team Udayavani |

ಬೆಂಗಳೂರು : ಸಂಪುಟ ವಿಸ್ತರಣೆಗಾಗಿ ಹಂಬಲಿಸಿ ಬಹಿರಂಗ ಹೇಳಿಕೆ‌‌ ನೀಡುತ್ತಿರುವ ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.

Advertisement

ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಶಾಸಕರು ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ಹಾಗಿಲ್ಲ.  ಮಾಧ್ಯಮ ಹೇಳಿಕೆ ನೀಡಿದವರ ಜೊತೆ ಮಾತಾಡುವೆ. ಕೆಲವರಿಗೆ ನೋಟಿಸ್ ನೀಡಲು ಚಿಂತಿಸಿದ್ದೇವೆ. ಯಾವ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಪುಟ ರಚನೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಸಿಎಂ‌ ಜತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತದೆ. ಹೀಗಾಗಿ ಶಾಸಕರು ಬಹಿರಂಗ ಹೇಳಿಕೆ ನೀಡುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next