Advertisement

ಭಗವಾನ್ ಬಾಹುಬಲಿಗೆ ಅವಹೇಳನ: ನ್ಯೂ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ಬಂಧನ

11:31 AM Feb 13, 2022 | Team Udayavani |

ಮೈಸೂರು: ಭಗವಾನ್ ಬಾಹುಬಲಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ನ್ಯೂ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ರನನ್ನು ಉದಯಗಿರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೆಬ್ರವರಿ 25ರವರೆಗೆ ಅಯೂಬ್ ಖಾನ್ ​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement

ಮೈಸೂರಿನ ಉದಯಗಿರಿ ಠಾಣೆ ಪೊಲೀಸರಿಂದ ಅಯೂಬ್ ವಶಕ್ಕೆ ಪಡೆದಿದ್ದಾರೆ. ಅವಹೇಳನಕಾರಿ ಹೇಳಿಕೆ ಹಿನ್ನೆಲೆ ಅಯೂಬ್ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಅಯೂಬ್ ಖಾನ್ ರನ್ನು ಮೈಸೂರಿನ 2ನೇ ಜೆಎಂಎಫ್​ಸಿ ಕೋರ್ಟ್​ ಜಡ್ಜ್​​ ಶ್ರೀಶೈಲಾ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ, ಫೆಬ್ರವರಿ 25ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಇದನ್ನೂ ಓದಿ:ಸಾರಿಗೆ ಸಂಸ್ಥೆಗಳ ಅನುದಾನದಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಹಿಜಾಬ್ ಕುರಿತ ವಿವಾದದ ವಿಚಾರವಾಗಿ ಮಾತನಾಡುತ್ತಾ ಅಯೂಬ್ ಖಾನ್ ಬಾಹುಬಲಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ಪರಿಣಾಮ ಜೈನ ಸಮುದಾಯವು ಅಯೂಬ್ ಖಾನ್ ವಿರುದ್ಧ ಸಿಡಿದೆದ್ದಿತ್ತು. ರಾಜ್ಯದ ನಾನಾ ಕಡೆ ಅಯೂಬ್ ಮೇಲೆ ದೂರು ದಾಖಲಾಗಿತ್ತು.

Advertisement

ಕ್ರಿಮಿನಲ್ ಕೇಸ್‌ ದಾಖಲಿಸಿ ಬಂಧಿಸುವಂತೆ ಜೈನ ಸಮುದಾಯದ ಸಂಘಟನೆಗಳು ಒತ್ತಾಯಿಸಿದ್ದ ಪರಿಣಾಮ ಅಯೂಬ್ ಖಾನ್ ನನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next