Advertisement

ನಿರ್ಭಯಾ ಪ್ರಕರಣ ಅಕ್ಷಯ್ ಠಾಕೂರ್ ಕ್ಷಮಾದಾನ ಅರ್ಜಿ ತಿರಸ್ಕೃತ

09:17 AM Feb 06, 2020 | Team Udayavani |

ನವದೆಹಲಿ: ನಿರ್ಭಯಾ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಅಪರಾದಿಗಳಲ್ಲಿ ಓರ್ವನಾಗಿರುವ ಅಕ್ಷಯ್ ಸಿಂಗ್ ಠಾಕೂರ್ ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಇಂದು ತಿರಸ್ಕರಿಸಿದ್ದಾರೆ.

Advertisement

ಅಕ್ಷಯ್ ಠಾಕೂರ್ ತನ್ನ ಕ್ಷಮಾದಾನದ ಅರ್ಜಿಯನ್ನು ಶನಿವಾರದಂದು ರಾಷ್ಟ್ರಪತಿಯವರಿಗೆ ಸಲ್ಲಿಸಿದ್ದ. ನಿರ್ಭಯಾ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರುವ ನಾಲ್ವರು ಆರೋಪಿಗಳ ಪೈಕಿ ಮೂವರ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಯವರು ಈಗಾಗಲೇ ತಿರಸ್ಕರಿಸಿದ್ದಾರೆ.

ಈ ಮೂಲಕ ಮುಖೇಶ್, ವಿನಯ್ ಶರ್ಮಾ ಮತ್ತು ಅಕ್ಷಯ್ ಠಾಕೂರ್ ಅವರ ಕ್ಷಮಾದಾನ ಅರ್ಜಿಗಳು ರಾಷ್ಟ್ರಪತಿಯವರಿಂದ ತಿರಸ್ಕೃತಗೊಂಡಿದ್ದು ಇನ್ನು ಪವನ್ ಗುಪ್ತಾ ಮಾತ್ರ ತನ್ನ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಲು ಬಾಕಿ ಇದೆ.

Advertisement

Udayavani is now on Telegram. Click here to join our channel and stay updated with the latest news.

Next