Advertisement

ರಾಮಮಂದಿರ ಕಟ್ಟಡ ನಿರ್ಮಾಣ; ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೀಡಿದ ದೇಣಿಗೆ ಎಷ್ಟು?

02:43 PM Jan 15, 2021 | Team Udayavani |

ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಿಸುವ ನಿಟ್ಟಿನಲ್ಲಿ ರಾಮ್ ಜನ್ಮಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್ ನ ನಿಯೋಗ ಶುಕ್ರವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ದೇಣಿಗೆ ಪಡೆದಿರುವುದಾಗಿ ವರದಿ ತಿಳಿಸಿದೆ.

Advertisement

ರಾಷ್ಟ್ರಪತಿ ಕೋವಿಂದ್ ಅವರು ತನ್ನ ವೈಯಕ್ತಿಕ ಖಾತೆಯಿಂದ ರಾಮ್ ಜನ್ಮಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್ ಹೆಸರಿಗೆ 5 ಲಕ್ಷದ ನೂರು ರೂಪಾಯಿ ಚೆಕ್ ನೀಡಿ ಬೆರಗುಗೊಳಿಸಿರುವುದಾಗಿ ವರದಿ ವಿವರಿಸಿದೆ.

ರಾಮಮಂದಿರ ನಿರ್ಮಾಣ ಸಮಿತಿಯ ವಿಶ್ವಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ರಾಮ್ ಜನ್ಮಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್ ನ ಖಜಾಂಚಿ ಗೋವಿಂದ್ ದೇವ್ ಗಿರಿ ಮತ್ತು ಮಾಜಿ ಅಧಿಕಾರಿ ನೃಪೇಂದ್ರಾ ಮಿಶ್ರಾ ನೇತೃತ್ವದ ನಿಯೋಗ ರಾಷ್ಟ್ರಪತಿ ಬಳಿ ತೆರಳಿತ್ತು.

ಟ್ರಸ್ಟ್ ಕಡ್ಡಾಯವಾಗಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಬೇಕಾಗಿದೆ.ದೇಶದ 52,50,000 ಹಳ್ಳಿಗಳಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಅಭಿಯಾನ ಹಮ್ಮಿಕೊಂಡಿದ್ದು, ಸಂಗ್ರಹವಾದ ಹಣವನ್ನು 48ಗಂಟೆಗಳಲ್ಲಿ ಬ್ಯಾಂಕ್ ನಲ್ಲಿ ಠೇವಣಿ ಇಡಬೇಕಾಗಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next