Advertisement

ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ

09:53 AM Dec 14, 2019 | keerthan |

ಹೊಸದಿಲ್ಲಿ: ಬಹು ಚರ್ಚಿತ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದು, ಇನ್ನು ಕಾಯ್ದೆಯಾಗಿ ಜಾರಿಗೆ ಬರಲಿದೆ.

Advertisement

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರದ ಮಹತ್ವಾಕಾಂಕ್ಷಿ ಪೌರತ್ವ ತಿದ್ದುಪಡಿ ಯೋಜನೆ ಕಳೆದ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದರೆ, ಬುಧವಾರ ರಾಜ್ಯಸಭೆಯಲ್ಲಿ ಒಪ್ಪಿಗೆ ಪಡೆದಿತ್ತು.

ಸರಕಾರದ ಅಧಿಕೃತ ಗೆಜೆಟ್ ನಲ್ಲಿ ಪ್ರಕಟವಾಗುವ ಮೂಲಕ ಈ ಮಸೂದೆ ಕಾಯಿದೆಯಾಗಿ ಜಾರಿಗೆ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಕಾಯ್ದೆ ಪ್ರಕಾರ ಪಾಕಿಸ್ಥಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನ ದೇಶಗಳಲ್ಲಿ ಧಾರ್ಮಿಕ ಕಿರುಕುಳ ಅನುಭವಿಸಿ 2014ರ ಡಿಸೆಂಬರ್ 31ರ ಒಳಗೆ ಭಾರತಕ್ಕೆ ಆಶ್ರಯಕ್ಕಾಗಿ ಆಗಮಿಸಿದ ಮುಸ್ಲಿಮೇತರರಿಗೆ (ಹಿಂದೂ, ಸಿಖ್ಖ್, ಬೌಧ್ದರು, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯ) ಭಾರತದ ಪೌರತ್ವ ನೀಡಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next