Advertisement

ಉಡುಪಿಯಲ್ಲಿ ರಾಷ್ಟ್ರಪತಿ ಭೇಟಿಗೆ ಸಿದ್ಧತೆ

09:34 AM Dec 17, 2018 | Team Udayavani |

ಉಡುಪಿ: ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸನ್ಯಾಸಾಶ್ರಮ ಸ್ವೀಕರಿಸಿದ 80ನೇ ವರ್ಧಂತಿ ಅಂಗವಾಗಿ ಅವರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಡಿ. 27ರಂದು ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯು ರವಿವಾರ ಸಂಜೆ ಉಡುಪಿ ಪೇಜಾವರ ಮಠದ ರಾಮವಿಟಲ ಸಭಾಂಗಣದಲ್ಲಿ ನಡೆಯಿತು. 

Advertisement

ಡಿ. 27ರ ಮಧ್ಯಾಹ್ನ 12.10ಕ್ಕೆ ಆಗಮಿಸುವ ರಾಷ್ಟ್ರಪತಿಯವರು ಒಂದು ತಾಸು ಉಡುಪಿಯಲ್ಲಿರುತ್ತಾರೆ. ಕೇಂದ್ರ ಸಚಿವೆ, ಶ್ರೀಗಳ ಶಿಷ್ಯೆ ಉಮಾಭಾರತಿ ಆಯೋಜಿಸುವ ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ, ನಾಗಾಲ್ಯಾಂಡ್‌ ರಾಜ್ಯಪಾಲ ಪಿ.ಬಿ. ಆಚಾರ್ಯ ಪಾಲ್ಗೊಳ್ಳುವರು. 

ರಾಜಾಂಗಣದಲ್ಲಿ  ಸಭೆ?
ರಥಬೀದಿಯಲ್ಲಿ ಸಭೆ ನಡೆಸಲು ಇಕ್ಕಟ್ಟಾಗುತ್ತದೆ. ರಾಜಾಂಗಣದ ಪಾರ್ಕಿಂಗ್‌ ಪ್ರದೇಶ ತೆರೆದ ಸ್ಥಳವಾದ ಕಾರಣ ಭದ್ರತಾ ದೃಷ್ಟಿಯಿಂದ ಸೂಕ್ತವಲ್ಲ. ರಾಜಾಂಗಣ ಸಭಾಂಗಣವು ಆವರಣ ಹೊಂದಿರುವುದರಿಂದ ಇದು ಸೂಕ್ತ ಎಂಬ ಅಭಿಪ್ರಾಯ ಬಂತು. “ಇಲ್ಲಿ ಸಭೆ ಮಾಡಿದರೆ ವೇದಿಕೆಯಿಂದ 30 ಮೀ. ಅಂತರ ಖಾಲಿ ಬಿಡಬೇಕು. ಬಹುತೇಕ ಅರ್ಧಾಂಶ ಸಭಾಂಗಣದಲ್ಲಿ ಮಾತ್ರ ಜನರು ಕುಳಿತುಕೊಳ್ಳಬಹುದು. ಮೇಲ್ಭಾಗದಲ್ಲಿ ಕುಳಿತುಕೊಳ್ಳಲು ಅವಕಾಶಗಳಿಲ್ಲ’ ಎಂದು  ಪರ್ಯಾಯ ಶ್ರೀ ಪಲಿಮಾರು ಮಠದ ಅಧಿಕಾರಿ ಪ್ರಹ್ಲಾದ ಆಚಾರ್ಯ ತಿಳಿಸಿದರು. 

ಸರ್ಕಲ್‌ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಮಾತನಾಡಿ, ಕಾರ್ಯಕ್ರಮಕ್ಕೆ ಒಂದು ತಾಸು ಮುನ್ನ  ಆಹ್ವಾನಿತರು ಸಭೆಯಲ್ಲಿ ಆಸೀನರಾಗಬೇಕು. ಶ್ರೀ ಕೃಷ್ಣಮಠ ಪರಿಸರದ 100 ಮೀ. ಸುತ್ತಲಿನ ಎಲ್ಲ ಅಂಗಡಿಗಳನ್ನು ಮುಚ್ಚ ಬೇಕು. ಆಗಮಿಸುವ ವಿಐಪಿಗಳಿಗೆ ಪಾಸ್‌ ನೀಡಬೇಕು. ಅವರು ಪಾಸ್‌ನೊಂದಿಗೆ ಗುರುತು ಚೀಟಿಯನ್ನು ತರಬೇಕು. ಪಾರ್ಕಿಂಗ್‌ ಪ್ರದೇಶದಲ್ಲಿ ಪಾರ್ಕಿಂಗ್‌ಗೆ ಅವಕಾಶವಿಲ್ಲ. ಆ ದಿನ ಮಠದ ಪರಿಸರವನ್ನು ಎನ್‌ಎಸ್‌ಜಿ ತನ್ನ ಸುಪರ್ದಿಗೆ ತೆಗೆದುಕೊಳ್ಳುತ್ತದೆ. ರಾಜಾಂಗಣದ ಸಮೀಕ್ಷೆ ನಡೆಸಿದ್ದೇವೆ. ಅಂತಿಮ ನಿರ್ಣಯವನ್ನು ಎನ್‌ಎಸ್‌ಜಿ ತೆಗೆದುಕೊಳ್ಳುತ್ತದೆ ಎಂದರು. 

ಗಣ್ಯರಾದ ನಳಿನಿ ಪ್ರದೀಪ್‌, ಬಾಲಾಜಿ ರಾಘವೇಂದ್ರ ಆಚಾರ್ಯ, ಕೆ.ಕೆ. ಸರಳಾಯ, ಗಣೇಶ ರಾವ್‌, ಪ್ರದೀಪ್‌ಕುಮಾರ್‌ ಕಲ್ಕೂರ, ವಿ.ಜಿ. ಶೆಟ್ಟಿ, ವಿಲಾಸ ನಾಯಕ್‌, ದೇವದಾಸ ಹೆಬ್ಟಾರ್‌ ಉಪಸ್ಥಿತರಿದ್ದು ಚರ್ಚಿಸಿದರು. ವಾಸುದೇವ ಭಟ್‌ ಪೆರಂಪಳ್ಳಿ ನಿರ್ವಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next