Advertisement

ಬೆಳಗಾವಿಗೆ ಇಂದು ರಾಷ್ಟ್ರಪತಿ ಭೇಟಿ

06:05 AM Sep 15, 2018 | Team Udayavani |

ಬೆಳಗಾವಿ: ಕರ್ನಾಟಕ ಲಾ ಸಂಸ್ಥೆ ಹಾಗೂ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ 75ನೇ ವರ್ಷಾಚರಣೆ ನಿಮಿತ್ತ ಶನಿವಾರ ಜಿಐಟಿ ಕಾಲೇಜು ಆವರಣದಲ್ಲಿ ನಡೆಯಲಿರುವ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ ಆಗಮಿಸಲಿದ್ದಾರೆ. 

Advertisement

ಸಾಂಬ್ರಾ ವಿಮಾನ ನಿಲ್ದಾಣದಿಂದ ಜಿಐಟಿ ಕಾಲೇಜುವರೆಗೆ ಕಾರಿನ ಮೂಲಕ ಅವರು ಪ್ರಯಾಣಿಸಲಿದ್ದು, ಈ ಹಿನ್ನೆಲೆಯಲ್ಲಿ ಕುಂದಾ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ರಾಷ್ಟ್ರಪತಿ ಜತೆಗೆ ಅವರ ಪತ್ನಿ ಸವಿತಾ ಕೋವಿಂದ ಕೂಡ ಬರುತ್ತಿದ್ದು, ಸ್ವಾಗತಕ್ಕೆ ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಐಟಿ ಕಾಲೇಜು ಆವರಣದಲ್ಲಿ ಬೃಹತ್‌ ಪೆಂಡಾಲ್‌ ನಿರ್ಮಿಸಲಾಗಿದ್ದು, ಸುಮಾರು 5 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ.
  
ಈ ಮಧ್ಯೆ, ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ವಜುಭಾಯ್‌ ವಾಲಾ ಅವರು ಹುಬ್ಬಳ್ಳಿಯಿಂದ ರಸ್ತೆ ಮೂಲಕ ಶುಕ್ರವಾರ ಬೆಳಗಾವಿಗೆ ಆಗಮಿಸಿದ್ದು, ವಿಟಿಯು ಗೆಸ್ಟ್‌ ಹೌಸ್‌ನಲ್ಲಿ ತಂಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next