Advertisement

ರಾಷ್ಟ್ರಪತಿ ಕೋವಿಂದ್ ಆರೋಗ್ಯದಲ್ಲಿ ಚೇತರಿಕೆ-ಐಸಿಯುನಿಂದ ವಿಶೇಷ ವಾರ್ಡ್ ಗೆ ಶಿಫ್ಟ್

04:15 PM Apr 03, 2021 | Team Udayavani |

ನವದೆಹಲಿ: ತೆರೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಆರೋಗ್ಯ ಸುಧಾರಿಸಿದ್ದು, ಅವರನ್ನು ಐಸಿಯುನಿಂದ ವಿಶೇಷ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.

Advertisement

ಇದನ್ನೂ ಓದಿ:ಚಲಿಸುವ ರೈಲಿನಿಂದ ಬಿದ್ದ ತಾತ : ಕ್ಷಣಾರ್ಧದಲ್ಲಿ ಕಾಪಾಡಿದ ಭದ್ರತಾ ಸಿಬ್ಬಂದಿ!

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಇಂದು ಏಮ್ಸ್ ನ ಐಸಿಯುನಿಂದ ವಿಶೇಷ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ. ಅವರ ಆರೋಗ್ಯ ನಿರಂತರವಾಗಿ ಸುಧಾರಿಸುತ್ತಿದೆ. ವೈದ್ಯರು ಅವರ ಆರೋಗ್ಯ ಸ್ಥಿತಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿರುವುದಾಗಿ ಕೋವಿಂದ್ ಟ್ವೀಟ್ ಮೂಲಕ ತಿಳಿಸಿದ್ದಾರೆ.


ಮಾರ್ಚ್ 30ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ (75ವರ್ಷ) ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ರಾಷ್ಟ್ರಪತಿ ಕೋವಿಂದ್ ಅವರು ಶೀಘ್ರ ಗುಣಮುಖರಾಗಲಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಹಾರೈಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next