Advertisement

ಪ್ರಚಾರಕ್ಕೆ ರಾಷ್ಟ್ರಪತಿಗಳ ಭಾಷಣ ಸೀಮಿತ: ಖರ್ಗೆ ಟೀಕೆ

02:05 AM Feb 01, 2024 | Team Udayavani |

ಹೊಸದಿಲ್ಲಿ: ಸಂಸತ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣವು ಪ್ರಧಾನಿ ನರೇಂದ್ರ ಮೋದಿ ಪರ ಪ್ರಚಾರದ ಭಾಷಣವಾಗಿತ್ತು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, “ದೇಶ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅದರ ಪರಿಹಾರಗಳ ಕುರಿತು ಮಾತನಾಡುವ ಬದಲು, ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಡಳಿತವನ್ನು ಶ್ಲಾಘಿಸಲು ರಾಷ್ಟ್ರಪತಿಗಳ ಭಾಷಣ ಮೀಸಲಾಗಿತ್ತು” ಎಂದು ಹೇಳಿದ್ದಾರೆ.

“ರಾಷ್ಟ್ರಪತಿಗಳ ಭಾಷಣ ರಾಜಕೀಯ ಭಾಷಣದಂತಿತ್ತು. ಅದು ಪ್ರಧಾನಿ ಪರವಾಗಿ ಜಾಹೀರಾತಿನಂತಿತ್ತು. ಕೇಂದ್ರದ ಆಡಳಿತವನ್ನು ಹೊಗಳಲು ಮೀಸಲಾಗಿತ್ತು” ಎಂದು ಖರ್ಗೆ ಟೀಕಿಸಿದ್ದಾರೆ. “ಮುರ್ಮು ಅವರ ಭಾಷಣದಲ್ಲಿ ನಿರುದ್ಯೋಗ ಸೇರಿದಂತೆ ಬಡವರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಯಾವುದೇ ಉಲ್ಲೇಖವಿರಲಿಲ್ಲ’ ಎಂದಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next