Advertisement
ಜತೆಗೆ 2024ರ ಒಳಗಾಗಿ ದೇಶದ ಅರ್ಥ ವ್ಯವಸ್ಥೆ ಯನ್ನು 5 ಲಕ್ಷಕೋಟಿ ಡಾಲರ್ಗೆ ಏರಿಸುವುದರ ಜತೆಗೆ ತ್ರಿವಳಿ ತಲಾಖ್, ರಾಷ್ಟ್ರೀಯ ಪೌರತ್ವ ಕಾಯ್ದೆ (ಎನ್ಆರ್ಸಿ) ಯನ್ನು ಆದ್ಯತೆಯಲ್ಲಿ ಜಾರಿ ಮಾಡುವುದು ಸರ್ಕಾರದ ಆದ್ಯತೆ ಎಂದು ಹೇಳಿದ್ದಾರೆ. 2014ರಲ್ಲಿ ಶುರ ುವಾದ ಅಭಿವೃದ್ಧಿ ಕಾರ್ಯ ಮುಂದುವರಿಸಲು ಜನ ಹಾಲಿ ಸರ್ಕಾರಕ್ಕೇ ಮತ ನೀಡಿದ್ದಾರೆ ಎಂದಿದ್ದಾರೆ.
Related Articles
Advertisement
78 ಮಹಿಳೆಯರು ಸಂಸತ್ ಸದಸ್ಯರಾಗಿ ಆಯ್ಕೆ ಯಾಗಿದ್ದಾರೆ. ಲೋಕ ಸಭೆಯ ಇತಿಹಾಸದಲ್ಲಿಯೇ ಇದು ಮೊದಲು ಎಂದಿದ್ದಾರೆ ರಾಷ್ಟ್ರಪತಿ. ಮಹಿಳಾ ಸಬಲೀಕರಣ ಮಾತ್ರ ಸರ್ಕಾರದ ಆದ್ಯತೆಯಾಗಿರದೆ, ಅವರ ನೇತೃತ್ವದಲ್ಲಿಯೇ ದೇಶದ ಅಭಿವೃದ್ಧಿ ಕೆಲಸಗಳು ನಡೆಯಬೇಕೆನ್ನುವುದೇ ಮಹತ್ವಾಕಾಂಕ್ಷೆ ಯಾಗಿದೆ ಎಂದಿದ್ದಾರೆ.
ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯಿಂದಾಗಿ ವಿವಿಧ ಭಾಗಗಳಲ್ಲಿ ಹೆಣ್ಣು ಭ್ರೂಣಹತ್ಯೆ ಪ್ರಮಾಣ ಗಣನೀ ಯವಾಗಿ ತಗ್ಗಿದೆ. ಮಹಿಳೆಯರ ಮತ್ತು ಪುರುಷರ ನಡುವಿನ ಅನುಪಾತ ಗಣನೀಯವಾಗಿ ಸುಧಾರಿಸಿದೆ ಎಂದಿದ್ದಾರೆ.
ಗ್ರಾಮೀಣರೇ ಹೆಚ್ಚು: ಕೇಂದ್ರ ಸರ್ಕಾರ ಜಾರಿಗೊಳಿಸಿದ ಉಜ್ವಲ ಯೋಜನೆ, ‘ಮಿಷನ್ ಇಂದ್ರಧನುಸ್ಸು’, ಉಚಿತವಾಗಿ ವಿದ್ಯುತ್ ನೀಡುವ ‘ಸೌಭಾಗ್ಯ ಯೋಜನೆ’ಯಲ್ಲಿ ಲಾಭ ಪಡೆದವರು ಗ್ರಾಮೀಣ ಪ್ರದೇಶದ ಮಹಿಳೆಯರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಮಹಿಳೆಯರಿಗೇ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ರಾಷ್ಟ್ರಪತಿ ಹೇಳಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 2 ಕೋಟಿ ಮನೆಗಳನ್ನು ನಿರ್ಮಿಸಲಾಗುತ್ತದೆ ಎಂದಿದ್ದಾರೆ.
ಎನ್ಆರ್ಸಿ ಆದ್ಯತೆಯಲ್ಲಿ ಜಾರಿ: ಅಸ್ಸಾಂನಲ್ಲಿ ಉಗ್ರವಾದದಿಂದ ನಲುಗಿರುವ ಪ್ರದೇಶಗಳಲ್ಲಿ ರಾಷ್ಟ್ರೀಯ ಪೌರತ್ವ ಕಾಯ್ದೆ (ಎನ್ಆರ್ಸಿ)ಯನ್ನು ಆದ್ಯತೆಯಲ್ಲಿ ಜಾರಿ ಮಾಡಲಾಗುತ್ತದೆ. ಸಾಂಸ್ಕೃತಿಕ, ಸಾಮಾಜಿಕ ಮತ್ತು ಭಾಷೆಯ ವಿಚಾರಗಳನ್ನು ಸಂರಕ್ಷಿಸಲು ಅನುವಾಗುವಂತೆ ಕಾಯ್ದೆಗೆ ಕೆಲ ತಿದ್ದುಪಡಿಗಳನ್ನೂ ಮಾಡಲಾಗುತ್ತದೆ. ಗಡಿ ಪ್ರದೇಶಗಳಲ್ಲಿ ಅಕ್ರಮ ಒಳನುಸುಳುವಿಕೆ ತಡೆಗಟ್ಟಲು ಭದ್ರತೆ, ಗಸ್ತು ಬಿಗಿಗೊಳಿಸಲಾಗುತ್ತದೆ ಎಂದಿದ್ದಾರೆ.
ವೇಗ ವೃದ್ಧಿಸಲಿದೆ: ಕಪ್ಪುಹಣದ ವಿರುದ್ಧ ಹಲವು ರೀತಿಯ ಹೋರಾಟಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಎಂದು ಹೇಳಿದ ರಾಷ್ಟ್ರಪತಿ, ಮುಂದಿನ ದಿನಗಳಲ್ಲಿ ಅದು ಮತ್ತಷ್ಟು ವೇಗ ಪಡೆಯಲಿದೆ ಎಂದಿದ್ದಾರೆ. ಎರಡು ವರ್ಷಗಳ ಅವಧಿಯಲ್ಲಿ 4.25 ಲಕ್ಷ ಕಂಪನಿಗಳ ನಿರ್ದೇಶಕರನ್ನು ಅನರ್ಹಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಸರ್ಜಿಕಲ್, ಬಾಲಕೋಟ್ನಿಂದ ಶಕ್ತಿ ಪ್ರದರ್ಶನ
ರಾಷ್ಟ್ರೀಯ ಭದ್ರತೆಯು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಸರ್ಜಿಕಲ್ ದಾಳಿ ಹಾಗೂ ಬಾಲಕೋಟ್ ವೈಮಾನಿಕ ದಾಳಿಗಳ ಮೂಲಕ ಭಾರತವು ತನ್ನ ಸಾಮರ್ಥ್ಯ ಹಾಗೂ ಶಕ್ತಿಯನ್ನು ಪ್ರದರ್ಶಿಸಿದ್ದು, ಭವಿಷ್ಯದಲ್ಲೂ ಭದ್ರತೆಗಾಗಿ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತದೆ ಎಂದು ರಾಷ್ಟ್ರಪತಿ ಕೋವಿಂದ್ ತಿಳಿಸಿದ್ದಾರೆ. ಸರ್ಕಾರವು ಸೇನೆಯ ಆಧುನೀಕರಣ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವತ್ತ ಹೆಜ್ಜೆಯಿಟ್ಟಿದೆ. ಸದ್ಯದಲ್ಲೇ ಭಾರತೀಯ ಸೇನೆಗೆ ಮೊದಲ ರಫೇಲ್ ಯುದ್ಧ ವಿಮಾನ ಹಾಗೂ ಅಪಾಚೆ ಹೆಲಿಕಾಪ್ಟರ್ ಸೇರ್ಪಡೆಯಾಗಲಿದೆ. ಜತೆಗೆ, ಆಧುನಿಕ ರೈಫಲ್ಗಳು, ಟ್ಯಾಂಕ್ಗಳು, ಯುದ್ಧ ವಿಮಾನಗಳನ್ನು ದೇಶೀಯವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲೂ ನಿಯಮಗಳನ್ನು ರೂಪಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.