Advertisement

BJPಸೇರಲು ವಿಪಕ್ಷ ನಾಯಕರಿಗೆ ಒತ್ತಡ: ಕೈ

01:24 AM Apr 07, 2024 | Team Udayavani |

ಜೈಪುರ: ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿರುವ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ, ಮೋದಿ ಅವರಿಂದ ದೇಶ ನಾಶವಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಪ್ರಜಾಪ್ರ ಭುತ್ವವನ್ನು ಬಿಜೆಪಿ ಹಾಳು ಮಾಡುತ್ತಿದ್ದು, ವಿಪಕ್ಷ ನಾಯಕರು ಬಿಜೆಪಿ ಸೇರುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಹೇಳಿದ್ದಾರೆ.

Advertisement

ಜೈಪುರ ರ್ಯಾಲಿಯಲ್ಲಿ ಕಾಂಗ್ರೆಸ್‌ ಚುನಾವಣ ಪ್ರಣಾಳಿಕೆಯನ್ನೂ ಸಾರ್ವ ಜನಿಕವಾಗಿ ಇದೇ ಮೊದಲ ಬಾರಿಗೆ ಅನಾವರಣಗೊಳಿಸಲಾಯಿತು. ಬಳಿಕ ಮಾತ ನಾಡಿದ ಸೋನಿಯಾ ಗಾಂಧಿ ಅವರು, “10 ವರ್ಷಗಳ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದರೂ ನಿರುದ್ಯೋಗ, ಹಣದುಬ್ಬರ, ಆರ್ಥಿಕ ಕುಸಿತ ಮತ್ತು ಅಸಮಾನತೆಯಲ್ಲಿ ಯಾವುದೇ ಬದಲಾವಣೆ ಯಾಗಿಲ್ಲ. ಪ್ರಸ್ತುತ ನಮ್ಮ ದೇಶದ ಪ್ರಜಾ ಪ್ರಭುತ್ವ ಅಪಾಯದಲ್ಲಿದೆ. ಸಾಂವಿ ಧಾನಿಕ ಸಂಸ್ಥೆಗಳನ್ನು ಬಲವಂತವಾಗಿ ನಾಶ ಮಾಡ ಲಾಗುತ್ತಿದೆ. ಇದು ನಿರಂಕುಶ ಪ್ರಭು ತ್ವವಾ ಗಿದೆ. ನಾವೆಲ್ಲರೂ ಇದಕ್ಕೆ ಉತ್ತರ ನೀಡ ಬೇಕಾಗಿದೆ. ದೇಶದ ಪ್ರಜಾಪ್ರ ಭುತ್ವ ವನ್ನು ರಕ್ಷಣೆ ಮಾಡಬೇಕಿದೆ ಎಂದರು.

ಟೈಲರ್‌ ಕರೆಸಿ ಪ್ರಧಾನಿ ಮೋದಿ ಎದೆ ಅಳತೆ ಮಾಡೋಣ: ಮಲ್ಲಿಕಾರ್ಜುನ ಖರ್ಗೆ
ಮೋದಿ ಅವರು ತಮ್ಮದು 56 ಇಂಚಿನ ಎದೆ ಎಂದು ಕರೆದುಕೊಳ್ಳುತ್ತಾರೆ. ನಾವು ಟೈಲರನ್ನು ಕರೆಸಿ ಇದನ್ನು ಅಳತೆ ಮಾಡಿಸೋಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೇವಡಿ ಮಾಡಿದ್ದಾರೆ. ಬಹುಮತ ಸಿಕ್ಕರೆ ಸಂವಿಧಾನ ಬದಲಿಸುವುದಾಗಿ ಬಿಜೆಪಿ ಹಾಗೂ ಆರೆಸ್ಸೆಸ್‌ನವರು ಸೇರಿ ಹೇಳುತ್ತಿದ್ದಾರೆ. ಇದು ಸರಿಯಲ್ಲ ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ಸರದಾರ ಎಂದು ಖರ್ಗೆ ಟೀಕಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next