Advertisement

ಹೋಬಳಿ ಮಟ್ಟದಲ್ಲಿ ಆಧಾರ್‌ ಕೇಂದ್ರ ತೆರೆಯಲು ಒತ್ತಾಯ

01:32 PM Sep 30, 2019 | Suhan S |

ಹಾವೇರಿ: ಆಧಾರ್‌ ಕಾರ್ಡ್‌ ನೋಂದಣಿ ಹಾಗೂ ತಿದ್ದುಪಡಿ ಕೇಂದ್ರಗಳನ್ನು ಹೋಬಳಿ ಮಟ್ಟದಲ್ಲಿ ತೆರೆಯುವ ವ್ಯವಸ್ಥೆ ಮಾಡಬೇಕು ಎಂದು ಕೋರಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ತಾಲೂಕು ಘಟಕದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Advertisement

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಫಕ್ಕೀರೇಶ ಕಟ್ಟಿಮನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಹಾಲಗಿ, ಸವಣೂರು ತಾಲೂಕು ಅಧ್ಯಕ್ಷ ಗುಡ್ಡಪ್ಪ ತಿಪ್ಪಕ್ಕನವರ, ಪ್ರಧಾನ ಕಾರ್ಯದರ್ಶಿ ನಾಗರಾಜ ವಾಲಿಕಾರ, ತಾಲೂಕು ಪ್ರಧಾನ ಕಾರ್ಯದರ್ಶಿ ಶರಣಪ್ಪ ಬಾರಂಗಿ, ಮಹದೇವಪ್ಪ ಹೆಡಿಗೊಂಡ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next