Advertisement

ಒತ್ತಡಗಳಿಗೆ ಮಣಿಯದೆ ಕ್ರಮ ಕೈಗೊಳ್ಳಲಾಗುವುದು : ಸಿಎಂ ಯೋಗಿ ಆದಿತ್ಯನಾಥ್

06:14 PM Oct 08, 2021 | Team Udayavani |

ಲಕ್ನೋ : ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಯಾರೋಬ್ಬರಿಗೂ ಅನ್ಯಾಯವಾಗಲು ಬಿಡುವುದಿಲ್ಲ. ಯಾವುದೇ ಒತ್ತಡಗಳಿಗೆ ಮಣಿಯದೆ ಕ್ರಮ ಕೈಗೊಳ್ಳಲಾಗುವುದು ಎಂದು ಶುಕ್ರವಾರ ಉತ್ತರ ಪ್ರದೇಶ ಮುಖ್ಯ ಮಂತ್ರಿ  ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

Advertisement

ಮಾಧ್ಯಮಗಳಿಗೆ ಮಾತಾನಾಡಿದ ಅವರು, ನಾಲ್ಕು ಜನ ರೈತರು ಸೇರಿದಂತೆ ಎಂಟು ಜನ ಮೃತ ಪಟ್ಟ ಘಟನೆ  ದುರದೃಷ್ಟಕರ.  ಘಟನೆಯ ಬಗ್ಗೆ ಸರಕಾರ ಸೂಕ್ತ ತನಿಖೆ ಕೈಗೊಳ್ಳಲಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ, ಮತ್ತು ಕಾನೂನು ಪ್ರತಿಯೊಬ್ಬರಿಗೂ ಭದ್ರತೆ ನೀಡಿದಾಗ, ಅವರು ಯಾರೇ ಆಗಿರಲಿ ಅದನ್ನು ಕೈಗೆ ಎತ್ತಿಕೊಳ್ಳವ ಅಗತ್ಯವಿಲ್ಲ ಎಂದು ಸುದ್ದಿಗಾರರೊಂದಿಗೆ ಹೇಳಿದರು.

ಈ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ  ಪುತ್ರ ಆಶೀಶ್ ವಿಶ್ರಾ ಅವರನ್ನು ರಕ್ಷಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next