Advertisement

ವಿಐಎಸ್‌ಎಲ್‌ ಖರೀದಿಗೆ ಯಾರೂ ಮುಂದಾಗುತ್ತಿಲ್ಲ!

10:11 PM Feb 14, 2023 | Team Udayavani |

ನವದೆಹಲಿ: ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಸ್ಥಾವರ (ವಿಐಎಸ್‌ಎಲ್‌)ವನ್ನು ಮುಚ್ಚಲಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ಕಾರ್ಖಾನೆಯ ಸದ್ಯದ ಪರಿಸ್ಥಿತಿಯನ್ನು ನೋಡಿ, ಯಾರೂ ಕೂಡ ಖರೀದಿಗೆ ಮುಂದಾಗುತ್ತಿಲ್ಲ ಎಂದು ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಭಗವಂತ್‌ ಕರಾಡ್‌ ಹೇಳಿದ್ದಾರೆ.

Advertisement

ಕಬ್ಬಿಣ ಅದಿರು ಅಲಭ್ಯತೆ ಹಾಗೂ ಬಳಕೆಯಲ್ಲಿಲ್ಲದ ತಂತ್ರಜ್ಞಾನದಿಂದಾಗಿ ವೆಚ್ಚ ಹೆಚ್ಚಾಗಿ, ಉತ್ಪಾದನೆ ಕಡಿಮೆಯಾಗಿರುವ ಹಿನ್ನೆಲೆ ಕಾರ್ಖಾನೆ ಮುಚ್ಚುವ ನಿರ್ಣಯವನ್ನು ಸರ್ಕಾರ ಕೈಗೊಂಡಿರುವುದಾಗಿ ತಿಳಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಕರಾಡ್‌ ಲೋಕಸಭೆಯಲ್ಲಿ ಸ್ಪಷ್ಟನೆ ನೀಡಿದ್ದು, ಕಾರ್ಖಾನೆ ಖರೀದಿಗೆ ಕೆಲವು ಸಂಸ್ಥೆಗಳು ಒಲವು ತೋರಿದ್ದವು. ಆದರೆ, ಸದ್ಯದ ಸ್ಥಿತಿಗತಿ ಗಮನಿಸಿ ಬಂಡವಾಳ ಹೂಡಲು ಹಿಂದೇಟು ಹಾಕಿವೆ. ಯಾವ ಉದ್ಯಮಿಗಳು ಇಒಐ ಅರ್ಜಿ ಸಲ್ಲಿಸಿಲ್ಲ. ಹೀಗಾಗಿ ಕಾರ್ಖಾನೆ ಮುಚ್ಚುವುದು ಸರ್ಕಾರಕ್ಕೆ ಅನಿವಾರ್ಯ ಎಂದಿದ್ದಾರೆ.

 

 

Advertisement

Udayavani is now on Telegram. Click here to join our channel and stay updated with the latest news.

Next