Advertisement

ಸಾಂಕ್ರಾಮಿಕ ರೋಗ ತಡೆಗಟ್ಟಿ 

07:50 AM Aug 22, 2017 | |

ಉಡುಪಿ/ಮಂಗಳೂರು: ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕೂನ್‌ಗುನ್ಯಾ ಎಚ್‌1ಎನ್‌1 ಮುಂತಾದ ಕಾಯಿಲೆಗಳು ಹರಡದಂತೆ ಕ್ರಮ ಕೈಗೊಳ್ಳುವ ಸಲುವಾಗಿ ಸಾರ್ವಜನಿಕರು, ಹೊಸ ಕಟ್ಟಡ ನಿರ್ಮಾಣಕಾರರು ಹಾಗೂ ಉದ್ದಿಮೆದಾರರು ಈ ಕೆಳಗಿನ ಸೂಚನೆಗಳನ್ನು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕಟ್ಟುನಿಟ್ಟಾಗಿ ಪಾಲಿಸಲು ಸರಕಾರ ಸೂಚಿಸಿದೆ.

Advertisement

ಕಟ್ಟಡ/ಮನೆಗಳ ನೀರಿನ ತೊಟ್ಟಿ, ಡ್ರಮ್‌, ಬಕೆಟ್‌ಗಳಲ್ಲಿರುವ ನೀರನ್ನು ಆಗಾಗ ಬದಲಾಯಿಸಿ ಶುಚಿಗೊಳಿಸಬೇಕು, ನೀರು ಸಂಗ್ರಹ ಪರಿಕರಗಳನ್ನು ಸೊಳ್ಳೆ ಪ್ರವೇಶಿಸದಂತೆ ಭದ್ರವಾಗಿ ಮುಚ್ಚಿಡಬೇಕು, ಮನೆ ಮತ್ತು ಕಟ್ಟಡದ ಪರಿಸರವನ್ನು ಸ್ವಂತ ಜವಾಬ್ದಾರಿಯಿಂದ ಶುಚಿಗೊಳಿಸಬೇಕು ಮತ್ತು ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು, ಹೊಟೇಲ್‌ ಉದ್ದಿಮೆದಾರರು ಶುಚಿತ್ವದೊಂದಿಗೆ ಸಾರ್ವಜನಿಕರಿಗೆ ಕುಡಿಯಲು ಕಡ್ಡಾಯವಾಗಿ ಕುದಿಸಿ ಆರಿಸಿದ ನೀರನ್ನು ಮಾತ್ರ ನೀಡಬೇಕು, ಕಾರ್ಮಿಕರಿಗೆ ಮತ್ತು ಲಾಡ್ಜ್ನಲ್ಲಿ ತಂಗುವವರಿಗೆ ಸೊಳ್ಳೆ ಪರದೆ ನೀಡಬೇಕು, ಹೊಟೇಲ್‌ ಸುತ್ತಮುತ್ತ ನೀರು ನಿಂತಿದ್ದಲ್ಲಿ ವೇಸ್ಟ್‌ ಆಯಿಲ್‌ ಸಿಂಪಡಿಸಬೇಕು.

ಮನೆ ಸುತ್ತಮುತ್ತ ಎಸೆದ ಟಯರ್‌, ತೆಂಗಿನ ಚಿಪ್ಪುಗಳಲ್ಲಿ ಮತ್ತು ಇತರ ತ್ಯಾಜ್ಯ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ಜಾಗ್ರತೆ ವಹಿಸಬೇಕು. ಮನೆಯ ಕಿಟಕಿ ಬಾಗಿಲುಗಳಿಗೆ ಕೀಟ ತಡೆಗಟ್ಟುವ ಮೆಶ್‌/ಪರದೆಗಳನ್ನು ಅಳವಡಿಸಿಕೊಳ್ಳುವುದು, ಸೊಳ್ಳೆ ಕಡಿತದಿಂದ ರಕ್ಷಣೆಗೆ ಮೈತುಂಬಾ ಬಟ್ಟೆ ಧರಿಸುವುದು, ಸೊಳ್ಳೆ ನಿರೋಧಕ ಕ್ರೀಮ್‌ ಉಪಯೋಗಿಸಬೇಕು ಅಥವಾ ಸೊಳ್ಳೆ ಪರದೆ ಉಪಯೋಗಿಸಬೇಕು.

ನಿರ್ಲಕ್ಷ é ಬೇಡ
ಯಾವುದೇ ಜ್ವರ ಬಂದರೂ ನಿರ್ಲಕ್ಷ é ಮಾಡದೆ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಕಟ್ಟಡ ಕಾಮಗಾರಿ ಕೆಲಸಗಾರರಲ್ಲಿ ಮಲೇರಿಯಾ ಪ್ರಕರಣ ಕಂಡು ಬಂದಲ್ಲಿ ಅಲ್ಲಿ ಸಂಗ್ರಹವಾಗಿರುವ ನೀರು ಮತ್ತು ಕ್ಯೂರಿಂಗ್‌ಗಾಗಿ ನಿಲ್ಲಿಸಿರುವ ನೀರಿಗೆ ಅಬೇಟ್‌/ವೇಸ್ಟ್‌ ಆಯಿಲನ್ನು ವಾರಕ್ಕೊಮ್ಮೆ ಸಿಂಪಡಿಸಬೇಕು. ಕೆಲಸಗಾರರಿಗೆ ಸೊಳ್ಳೆ ಪರದೆ ಒದಗಿಸಬೇಕು. ಜ್ವರ ಕಂಡುಬಂದಲ್ಲಿ ತತ್‌ಕ್ಷಣ ಚಿಕಿತ್ಸೆ ಕೊಡಿಸಬೇಕು ಎಂದು ಸೂಚಿಸಲಾಗಿದೆ.

ಹೊಸ ಕಟ್ಟಡ ನಿರ್ಮಾಣಕಾರರು ಕಟ್ಟಡ ನಿರ್ಮಾಣದ ಕಲ್ಲು ಜಲ್ಲಿ ಇತ್ಯಾದಿ ಸಾಮಗ್ರಿಗಳನ್ನು ಮಳೆ ನೀರು ಹರಿಯುವ ರಸ್ತೆ/ಚರಂಡಿಯಲ್ಲಿ ಶೇಖರಿಸಿದ್ದಲ್ಲಿ ತತ್‌ಕ್ಷಣ ತೆರವುಗೊಳಿಸಬೇಕು. ಇದಕ್ಕೆ ಸ್ಪಂದಿಸದಿದ್ದಲ್ಲಿ ಕಾಯ್ದೆಯನ್ವಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಂಸ್ಥೆ ಪ್ರಕಟನೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next