Advertisement

ಚುನಾವಣೆಗೆ ಮುಂಜಾಗ್ರತೆ ಕ್ರಮ:  ಕಮಿಷನರ್‌

12:30 AM Mar 23, 2019 | Team Udayavani |

ಮಂಗಳೂರು: ಲೋಕಸಭೆ ಚುನಾವಣೆ ಸಂದರ್ಭ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆಯ ಕ್ರಮವಾಗಿ ಹಾಗೂ ಶಾಂತಿ ಯುತವಾಗಿ ಮತದಾನ ನಡೆ ಯುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಗಳನ್ನು ಕೈಗೊಳ್ಳಲಾಗಿದೆ ಎಂದು ಕಮಿಷನರ್‌ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

Advertisement

ಮಂಗಳೂರು ನಗರಕ್ಕೆ ಭದ್ರತೆ ಗಾಗಿ ಕೇಂದ್ರೀಯ ಸಶಸ್ತ್ರ ಮೀಸಲು ಪೊಲೀಸ್‌ ದಳದ ಒಂದು ಕಂಪೆನಿ ಬಂದಿದೆ. ಈಗಾಗಲೇ 12 ಸೂಕ್ಷ್ಮ ಪ್ರದೇಶಗಳಲ್ಲಿ ಸಿಎಪಿಎಫ್‌ ಮತ್ತು ಪೊಲೀಸ್‌ ಇಲಾಖೆಯು ಜಂಟಿ ಪಥ ಸಂಚಲನವನ್ನು ನಡೆಸಿದೆ. ಈಗಾಗಲೇ ಒಟ್ಟು 1,957 ಬಂದೂಕುಗಳನ್ನು ಸ್ಥಳೀಯ ಠಾಣೆಗಳಿಗೆ ಒಪ್ಪಿಸಲಾಗಿದೆ. 447 ಜಾಮೀನು ರಹಿತ ವಾರೆಂಟ್‌ ವ್ಯಕ್ತಿಗಳನ್ನು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. 

1,206 ರೌಡಿ ಮತ್ತು ಗೂಂಡಾಗಳ ಮೇಲೆ ಮುಂಜಾಗ್ರತಾ ಕಾಯ್ದೆಯಡಿ ಮುಚ್ಚಳಿಕೆಯನ್ನು ಪಡೆಯಲಾಗಿದೆ. ಅಲ್ಲದೆ ರೌಡಿಗಳಿಗೆ ಯಾವುದೇ ಕ್ರಿಮಿನಲ್‌ ಚಟುವಟಿಕೆಗಳಲ್ಲಿ ಭಾಗ ವಹಿಸದಂತೆ ಎಚ್ಚರಿಕೆ ನೀಡಲಾಗಿದೆ. ಎಲ್ಲ ಪೊಲೀಸ್‌ ಅಧಿಕಾರಿ ಮತ್ತು ಸಿಬಂದಿಗೆ ಚುನಾವಣಾ ಕರ್ತವ್ಯದ ತರಬೇತಿ ನೀಡಲಾಗಿದೆ ಎಂದು ಕಮಿಷನರ್‌ ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next