Advertisement
ಅರಣ್ಯ ಇಲಾಖೆಗೆ ಮಾಹಿತಿ ನೀಡದೆ, ಕೆಇಬಿ ವಸತಿ ಆವರಣದಲ್ಲಿ ಬೆಳೆದಿದ್ದ ಬೆಲೆಬಾಳುವ ಮರಗಳನ್ನು ಬೆಸ್ಕಾಂ ಸಿಬ್ಬಂದಿಯೊಬ್ಬರು ಕಡಿದು ಮಾರಾಟ ಮಾಡಿರುವ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನೇರಳೆ, ಮಾವು ಸೇರಿದಂತೆ ವಿವಿಧ ಜಾತಿಯ ಮರಗಳನ್ನು ಕಡಿದಿದ್ದು, ಸುಮಾರು 30 ಸಾವಿರಕ್ಕೂ ಹೆಚ್ಚು ಬೆಲೆ
ಬಾಳುವ ಮರಗಳಾಗಿವೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಬೆಸ್ಕಾ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಶಿವಕುಮಾರ್ ಅರಣ್ಯ ಇಲಾಖೆಗೆ ಸೇರಿದ್ದ ಮರಗಳನ್ನು ಕಡಿದವರಾಗಿದ್ದು, ಇವರ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿ ಜಯಚಂದ್ರ
ತಿಳಿಸಿದ್ದಾರೆ.