Advertisement

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಸೈಕಲ್‌ ಜಾಥಾ

09:47 PM Jul 10, 2021 | Team Udayavani |

ಹಾಸನ: ಪೆಟ್ರೋಲ್‌, ಡಿಸೇಲ್‌ ಹಾಗೂ ಅಡುಗೆಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಖಂಡಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್‌,ಸಂಸದ ಡಿ.ಕೆ.ಸುರೇಶ್‌ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್‌ಮುಖಂಡರು ಹಾಗೂ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಸೈಕಲ್‌ ಜಾಥಾ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisement

ನಗರದ ಬಿ.ಎಂ.ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ಭವನದಿಂದ ಹೊರಟ ಸೈಕಲ್‌ ಜಾಥಾ ಬಿಎಂ ರಸ್ತೆಮೂಲಕ ಎನ್‌.ಆರ್‌.ವೃತ್ತ, ದೇವಿಗೆರೆ ವೃತ್ತದ ಮೂಲಕಪ್ರವಾಸಿ ಮಂದಿರದ ವರೆಗೆ ಜಾಥಾ ನಡೆಸಿ ರಾಜ್ಯಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿವಿರುದ್ಧಕಾರ್ಯಕರ್ತರು ಘೋಷಣೆ ಕೂಗಿದರು.

ಕೊರೊನಾ ಸಂಕಷ್ಟದ ಸಂದರ್ಭಲ್ಲಿ ಪೆಟ್ರೋಲ್‌,ಡೀಸೆಲ್‌, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳಬೆಲೆ ಏರಿಕೆ ಮಾಡಿರುವುದು ಖಂಡನೀಯ. ಬಿಜೆಪಿ ಸರ್ಕಾರ ಬೆಲೆ ಇಳಿಕೆ ಮಾಡುವವರೆಗೂ ಕಾಂಗ್ರೆಸ್‌ಕಾರ್ಯಕರ್ತರು ನಿರಂತರ ಹೋರಾಟ ಮಾಡುವರುಎಂದು ಮುಖಂಡರು ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಾವಗಲ್‌ ಮಂಜುನಾಥ್‌,ಮಾಜಿ ಸಚಿವ ಬಿ.ಶಿವರಾಮು, ಎಂಎಲ್‌ಸಿ ಗೋಪಾಲಸ್ವಾಮಿ, ಪಕ್ಷದ ಮುಖಂಡರಾದ ಎಚ್‌.ಕೆ.ಜವರೇಗೌಡ,ಸಿ.ಎಸ್‌.ಪುಟ್ಟೇಗೌಡ, ಎಚ್‌.ಕೆ.ಮಹೇಶ್‌, ಬಾಗೂರುಮಂಜೇಗೌಡ, ಮಾಜಿ ಮೇಯರ್‌ ಹುಚ್ಚಪ್ಪ, ಮಂಜುನಾಥ್‌ ಭಂಡಾರಿ, ಕಟ್ಟೆ ಪ್ರಕಾಶ್‌ ಸೇರಿದಂತೆ ಹಲವುಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿಪಾಲ್ಗೊಂಡಿದ ªರು.

Advertisement

Udayavani is now on Telegram. Click here to join our channel and stay updated with the latest news.

Next