Advertisement

ಕನಕಪುರ: ಅಗ್ನಿಕೊಂಡ ನೆರವೇರುವ ಮುನ್ನವೇ ಕುಸಿದು ಬಿದ್ದು ಅರ್ಚಕ ಮೃತ್ಯು; ವಿಡಿಯೋ

02:14 PM Apr 03, 2023 | |

ಕನಕಪುರ: ಅಗ್ನಿಕೊಂಡ ನೆರವೇರುವ ಮುನ್ನವೇ ಅರ್ಚಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಾವತ್ತೂರು ಗ್ರಾಮದಲ್ಲಿ ಸೋಮವಾರ ( ಏ.3 ರಂದು) ನಡೆದಿದೆ.

Advertisement

ಮಾವತ್ತೂರು ಗ್ರಾಮದ ಮಾವತ್ತೂರಮ್ಮ ದೇವಿಯ ಅರ್ಚಕ ನಾಗರಾಜು ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.

ಸೋಮವಾರ ಮಾವತ್ತೂರಮ್ಮ ದೇವಿಯ ಅಗ್ನಿಕೊಂಡೋತ್ಸವದ ಅಂಗವಾಗಿ ಬೆಳಿಗ್ಗೆ ಗ್ರಾಮದಲ್ಲಿ ಅಗ್ನಿಕೊಂಡೋತ್ಸವಕ್ಕೆ ಮೆರವಣಿಗೆ ಮೂಲಕ ದೇವರನ್ನು ಕರೆದಿರುವಾಗ ಮಹಿಳೆ ಒಬ್ಬರು ವಿಚಿತ್ರವಾಗಿ ಕುಣಿಯಲಾರಂಭಿಸಿದರು. ಆಗ ಅರ್ಚಕ ನಾಗರಾಜು ಆ ಮಹಿಳೆಗೆ ಬೆತ್ತದಿಂದ ಒಡೆಯುತ್ತಿದ್ದಂತೆ ಮಹಿಳೆ ಅರ್ಚಕರ ಕಾಲಿಗೆ ಬಿದ್ದಿದ್ದಾಳೆ. ಈ ವೇಳೆ ಅರ್ಚಕ ನಾಗರಾಜು ಕುಸಿದು ಕೆಳಗೆ ಬಿದ್ದಿದ್ದಾರೆ.

ತಕ್ಷಣ ಅರ್ಚಕರನ್ನು ಆಸ್ಪತ್ರೆಗ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next