Advertisement

ಪರೀಕ್ಷೆ ಇಲ್ಲದೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭಡ್ತಿ: ಸಚಿವ ನಾಗೇಶ್‌

06:46 PM Apr 06, 2022 | Team Udayavani |

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಪ್ರಮುಖ ಬೇಡಿಕೆಯಾದ ಸ್ಪರ್ಧಾತ್ಮಕ ಪರೀಕ್ಷೆ ನಡೆಸದೆ ಭಡ್ತಿ ನೀಡುವ ಪ್ರಕ್ರಿಯೆಗೆ ಶಿಕ್ಷಣ ಇಲಾಖೆಯು ಹಸುರು ನಿಶಾನೆ ತೋರಿಸಿದೆ.

Advertisement

ನಗರದಲ್ಲಿ ಬುಧವಾರ ಶಿಕ್ಷಣ ಇಲಾಖೆಯು ಶಿಕ್ಷಕರ ಸಂಘದ ಪ್ರತಿನಿಧಿಗಳಿಗೆ ಆಯೋಜಿಸಿದ್ದ “ಕಲಿಕಾ ಚೇತರಿಕೆ’ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಈ ಬಗ್ಗೆ ಖಾತರಿಪಡಿಸಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರಿಗೆ (1ರಿಂದ 5ನೇ ತರಗತಿ) ಸ್ಪರ್ಧಾತ್ಮಕ ಪರೀಕ್ಷೆ ನಡೆಸದೆ ಹಿರಿಯ ಪ್ರಾಥಮಿಕ ಶಾಲೆಗೆ (5-8ನೇ ತರಗತಿ) ಭಡ್ತಿ ನೀಡಲು ನಿರ್ಧರಿಸಲಾಗಿದೆ.

ಶೇಕಡಾವಾರು ಎಷ್ಟು ಶಿಕ್ಷಕರಿಗೆ ಭಡ್ತಿ ನೀಡಬೇಕೆಂದು ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:ಅಲ್‌ಖೈದಾ ಬೆಂಬಲ; ಹಿಂದೂ ಹುಡುಗರಿಂದಾಗಿ ಮುಸ್ಕಾನ್ ಸುರಕ್ಷಿತ : ಸಿ.ಟಿ.ರವಿ

Advertisement

ಕೆಲವು ಮಕ್ಕಳು ಕಲಿಕೆಯಲ್ಲಿ ಮುಂದಿದ್ದಾರೆ. ಆದರೆ ಕೆಲವು ಮಕ್ಕಳು ತಮ್ಮ ಮನೆಯ ಪರಿಸ್ಥಿತಿ, ಕಲಿಕಾ ವಾತಾವರಣ, ಮಗುವಿಗೆ ಆಸಕ್ತಿ ಇಲ್ಲದಿರುವುದು ಸಹಿತ ವಿವಿಧ ಕಾರಣಗಳಿಗೆ ಕಲಿಕೆಯಿಂದ ಹಿಂದುಳಿದಿದ್ದಾರೆ. ಕೊರೊನಾ ಸಮಯದಲ್ಲಿ ಶಾಲೆಗಳು ನಡೆಯದಿರುವುದರಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ತರಬೇತಿ ನೀಡುವ ಉದ್ದೇಶದಿಂದ ಕಲಿಕಾ ಚೇತರಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಲಿಕೆಯಿಂದ ಹಿಂದುಳಿದ ಮಕ್ಕಳಿಗೆ ಶಿಕ್ಷಕರು ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಕನಿಷ್ಠ ಮುಂದಿನ ವರ್ಷವಾದರೂ ಮಕ್ಕಳು ಕಲಿಕಾ ಹಂತಕ್ಕೆ ಬರುವಂತೆ ಮಾಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಅನಿವಾರ್ಯ ಕಾರಣಗಳಿಂದ ಶಿಕ್ಷಕರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದ್ದು, ಪರಿಸ್ಥಿತಿ ಅರ್ಥ ಮಾಡಿಕೊಂಡು ಕಲಿಕಾ ಚೇತರಿಕೆ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ನಿರ್ದೇಶಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next