Advertisement

ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆ: ವಿಚಾರ ಸಂಕಿರಣ

10:40 PM Jun 07, 2019 | Sriram |

ಅಜೆಕಾರು: ತೋಟಗಾರಿಕೆ ಇಲಾಖೆ ಕಾರ್ಕಳ ಹಾಗೂ ಲೀಡ್‌ ಡಿಸ್ಟ್ರಿಕ್‌ ಬ್ಯಾಂಕ್‌ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರಧಾನಮಂತ್ರಿ ಫ‌ಸಲ್‌ ವಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ಬಿಮಾ ಯೋಜನೆ ಕುರಿತು ಕಾರ್ಕಳ ತಾ. ಪಂ. ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಿತು.


Advertisement

ಜಿ.ಪಂ. ಕೃಷಿ ಹಾಗೂ ಕೈಗಾರಿಕಾ ಸ್ಥಾಯೀ ಸಮಿತಿ ಅಧ್ಯಕ್ಷ ಉದಯ ಎಸ್‌. ಕೋಟ್ಯಾನ್‌ ಕಾರ್ಯಕ್ರಮ ಉದ್ಘಾಟಿಸಿ, ಹವಾಮಾನ ವೈಪರೀತ್ಯದಿಂದ ರೈತರು ಬೆಳೆದ ಬೆಳೆ ಕೈಗೆ ಸಿಗದೆ ನಷ್ಟ ಉಂಟಾಗುತ್ತಿದೆ. ಇಂತಹ ಸಂದರ್ಭ ಬೆಳೆವಿಮೆಯಿಂದ ಹೆಚ್ಚಿನ ಅನು ಕೂಲವಾಗಲಿದ್ದು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಕೃಷಿ ಉಪ ನಿರ್ದೇಶಕ ಚಂದ್ರಶೇಖರ್‌ ಮಾತನಾಡಿ ಭತ್ತ ಬೆಳೆ ಬಗ್ಗೆ ಮಾಹಿತಿ ನೀಡಿ ಪ್ರಧಾನಮಂತ್ರಿ ಫ‌ಸಲ್‌ ವಿಮಾ ಯೋಜನೆ ಅನುಷ್ಠಾನದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಸಹಾಯಕ ತೋಟಗಾರಿಕೆ ನಿರ್ದೇ ಶಕರಾದ ನಿಧೀಶ್‌ ಕೆ.ಜೆ. ಮಾತನಾಡಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.

ಬ್ರಹ್ಮಾವರ ಕೆವಿಕೆಯ ವಿಜ್ಞಾನಿಗಳಾದ ಡಾ| ಧನಂಜಯ್‌ ತೋಟಗಾರಿಕೆ ಬೆಳೆಗಳ ನಿರ್ವಹಣೆ ಕುರಿತು ಮಾಹಿತಿ ನೀಡಿದರು.

Advertisement

ಜಿ.ಪಂ. ಸದಸ್ಯರಾದ ಜ್ಯೋತಿ ಹರೀಶ್‌ ವಹಿಸಿದ್ದರು. ಜಿ.ಪಂ. ಸದಸ್ಯರಾದ ರೇಷ್ಮಾ ಉದಯ ಶೆಟ್ಟಿ, ಎಪಿಎಂಸಿ ನಿರ್ದೇಶಕರಾದ ಮುಟ್ಲುಪಾಡಿ ಸತೀಶ್‌ ಶೆಟ್ಟಿ, ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ರುದ್ರೇಶ್‌ ಬಿ.ಸಿ. ಉಪಸ್ಥಿತರಿದ್ದರು.

ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕಿ ಭುವನೇಶ್ವರಿ ಪ್ರಸ್ತಾವನೆಗೈದರು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶ್ರೀನಿವಾಸ್‌ ಬಿ.ವಿ. ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ತೋಟಗಾರಿಕೆ ಅಧಿಕಾರಿ ವರುಣ್‌ ಕೆ.ಜೆ. ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next