Advertisement

ಪ್ರಧಾನಿ ಮಾಡ್ತೀನಿ ಅಂದ್ರೂ ಬಿಜೆಪಿ ಕಡೆ ತಲೆ ಹಾಕಲ್ಲ: ಸಿದ್ದರಾಮಯ್ಯ

11:11 PM Apr 03, 2024 | Team Udayavani |

ಮೈಸೂರು: ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಪರಿಶಿಷ್ಟ ಜಾತಿ, ವರ್ಗಗಳ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿ, ನಮಗೆ ಸೈದ್ಧಾಂತಿಕ ಸ್ಪಷ್ಟತೆ ಇದ್ದಾಗ ಮಾತ್ರ ರಾಜಕೀಯ ಶಕ್ತಿ ಬರುತ್ತದೆ. ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ದೇವೇಗೌಡರು ಈಗ ಮೋದಿಗೂ ತಮಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ರಾಜಕಾರಣಿಯಾದವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು. ಬಿಜೆಪಿ ಹಿರಿಯ ನಾಯಕ ನಂಜೇಗೌಡ ಮತ್ತು ಗೂಳಿಹಟ್ಟಿ ಶೇಖರ್‌ ಕೂಡ ತಮ್ಮನ್ನು ಆರ್‌ಎಸ್‌ಎಸ್‌ ಗರ್ಭಗುಡಿಯೊಳಗೆ ಬಿಟ್ಟುಕೊಳ್ಳಲ್ಲ ಅಂತ ಬಹಿರಂಗವಾಗಿ ಹೇಳಿದ್ದಾರೆ. ಇದು ಸತ್ಯ. ಹೀಗಾಗಿ ಅವರು ಶೂದ್ರರನ್ನು ಕೇವಲ ಬಳಸಿಕೊಳ್ಳುತ್ತಾರೆ ಅಷ್ಟೆ. ಆದ್ದರಿಂದ ಆರ್‌ಎಸ್‌ಎಸ್‌ ಕಡೆ ಶೂದ್ರರು, ದಲಿತರು, ಮಹಿಳೆಯರು ಹೋಗಬಾರದು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next