Advertisement

ವಂದೇ ಭಾರತ್ ರೈಲು ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

04:07 PM Sep 30, 2022 | Team Udayavani |

ಗಾಂಧಿನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವಂದೇ ಭಾರತ್ 2.0 ಎಕ್ಸ್ ಪ್ರೆಸ್ ರೈಲನ್ನು ಗುಜರಾತಿನ ಗಾಂಧಿನಗರದಲ್ಲಿ ಲೋಕಾರ್ಪಣೆಗೊಳಿಸಿದರು.

Advertisement

ಬೆಳಗ್ಗೆ10:30ರ ಸುಮಾರಿಗೆ ಗಾಂಧಿನಗರ ರಾಜಧಾನಿ ರೈಲು ನಿಲ್ದಾಣದಿಂದ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ನಂತರ ಅವರು ಅಹಮದಾಬಾದ್‌ನ ಗಾಂಧಿನಗರ ಮತ್ತು ಕಲುಪುರ್ ರೈಲು ನಿಲ್ದಾಣದ ನಡುವೆ ಪ್ರಯಾಣಿಕರೊಟ್ಟಿಗೆ ಪ್ರಯಾಣ ಬೆಳೆಸಿದರು.

ಮಹಾರಾಷ್ಟ್ರ ಮತ್ತು ಗುಜರಾತ್‌ನ ರಾಜಧಾನಿ ನಗರಗಳನ್ನು ಸಂಪರ್ಕಿಸುವ ಈ ರೈಲು ದೇಶದ ಮೂರನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ. ಮೊದಲ ರೈಲು ಹೊಸದಿಲ್ಲಿ-ವಾರಣಾಸಿ ಮಾರ್ಗದಲ್ಲಿ ಪ್ರಾರಂಭಿಸಿದರೆ, ಎರಡನೆಯದು ಹೊಸದಿಲ್ಲಿ-ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಮಾರ್ಗದಲ್ಲಿ ಪ್ರಾರಂಭವಾಗಿದೆ.

ಈ ರೈಲು ಪ್ರಯಾಣಿಕರಿಗೆ ವಿಮಾನದಂತಹ ಪ್ರಯಾಣದ ಅನುಭವ ಮತ್ತು ಕವಚ್ ತಂತ್ರಜ್ಞಾನ ಸೇರಿದಂತೆ ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ರೈಲು ಇದಾಗಿದ್ದು, ರೈಲುಗಳ ನಡುವೆ ಅಪಘಾತ ತಪ್ಪಿಸುವ ವ್ಯವಸ್ಥೆ ಇದೆ.

Koo App

Advertisement

Udayavani is now on Telegram. Click here to join our channel and stay updated with the latest news.

Next