Advertisement

ಪ್ರಧಾನಿ ಮೋದಿಯನ್ನು ತಿರಸ್ಕರಿಸಿ

09:59 PM Apr 14, 2019 | Team Udayavani |

ಗುಂಡ್ಲುಪೇಟೆ: ದೇಶದ ಪ್ರಧಾನಿ ಸ್ಥಾನದಲ್ಲಿರುವ ನರೇಂದ್ರ ಮೋದಿ ಸುಳ್ಳುಗಾರ, ಅಂತಹವರನ್ನು ಚುನಾವಣೆಯಲ್ಲಿ ತಿರಸ್ಕರಿಸಿ ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.

Advertisement

ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಭಾನುವಾರ ನಡೆದ ಲೋಕಸಭಾ ಚುನಾವಣೆ ಸಭೆಯಲ್ಲಿ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಅಭ್ಯರ್ಥಿ ಆರ್‌. ಧ್ರುವನಾರಾಯಣ ಪರ ಮತಯಾಚಿಸಿದ ಅವರು ಮಾತನಾಡಿದರು.

ದೇಶದ ಜನರಿಗೆ ಕಳೆದ 5 ವರ್ಷಗಳಿಂದಲೂ ಭರವಸೆ ನೀಡುತ್ತಲೇ ಅಧಿಕಾರ ನಡೆಸಿಕೊಂಡು ಬಂದಿದ್ದಾರೆ. ಈವೆರೆಗೂ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಅಲ್ಲದೇ ಬಡವರ ಪರವಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಕ್ಷೇತ್ರದ ಅಭ್ಯರ್ಥಿ ಆರ್‌.ಧ್ರುವನಾರಾಯಣ ಪರ ಈ ಭಾಗದಲ್ಲಿ ಅಲೆ ಇದೆ. ಹಲವು ಅಭಿವೃದ್ಧಿ ಕೆಲಸಗಳನ್ನು ಅವರು ಮಾಡಿದ್ದಾರೆ. ಈ ಜಿಲ್ಲೆ ತುಂಬಾ ಹಿಂದುಳಿದಿತ್ತು. ಅದನ್ನು ಅವರು ಸಂಸದರಾದ 10 ವರ್ಷಗಳಲ್ಲಿ ಅಭಿವೃದ್ಧಿ ಪಥದತ್ತ ಮುನ್ನಡೆಸಿದ್ದಾರೆ. ಇನ್ನೂ ಹೆಚ್ಚಿನ ಯೋಜನೆಗಳನ್ನು ಅವರ ಅಧಿಕಾರವಧಿಯಲ್ಲಿ ತಂದು ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ.

ತಾಲೂಕಿಗೆ ಎಚ್‌.ಎಸ್‌.ಮಹದೇವಪ್ರಸಾದ್‌ ಜೊತೆಗೂಡಿ ಅವರ ಅಧಿಕಾರವಧಿಯಲ್ಲಿ ಹಲವು ಸಮುದಾಯ ಭವನಗಳು, ರಸ್ತೆ ನಿರ್ಮಾಣ ಮಾಡುವಲ್ಲಿ ಶ್ರಮಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗಾಗಿ ದುಡಿದಿದ್ದಾರೆ. ಧ್ರುವನಾರಾಯಣರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

Advertisement

ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಮುಖಂಡ ಹಂಗಳ ನಂಜಪ್ಪ, ಗಣೇಶ್‌ ಪ್ರಸಾದ್‌, ನಂಜುಂಡಪ್ರಸಾದ್‌, ಮುನಿರಾಜು, ನಾಜಿಮುದ್ದಿನ್‌, ಗೋವಿಂದರಾಜು, ರಾಮು ಹಾಗೂ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next