Advertisement

ಮತ್ತಷ್ಟು ಉತ್ತಮ ಆಡಳಿತಕ್ಕೆ ಶ್ರೀಕಾರ : ಹಳೇ ಬೇರು, ಹೊಸ ಚಿಗುರಿನ ಪರಿಕಲ್ಪನೆ

12:13 AM Nov 15, 2021 | Team Udayavani |

ಹೊಸದಿಲ್ಲಿ: ಕೇಂದ್ರದ ವಿವಿಧ ಇಲಾಖೆ­ಗಳಲ್ಲಿ ಹೆಚ್ಚಾಗಿ ಯುವಕರನ್ನು ನೇಮಿಸಿ­ಕೊಳ್ಳುವುದು, ಇಲಾಖೆಗಳ ನಿವೃತ್ತ ಅಧಿಕಾರಿಗಳಿಂದ ಸಲಹೆ-ಸೂಚನೆ ಪಡೆ­ಯು­ವುದು ಹಾಗೂ ತಂತ್ರಜ್ಞಾನದ ಲಾಭವನ್ನು ಗರಿಷ್ಠ ಮಟ್ಟಕ್ಕೆ ಬಳಸಿಕೊಳ್ಳು­ವುದು – ಈ ಮೂರನ್ನೂ ಬಳಸಿಕೊಂಡು ಈಗ ನೀಡಲಾಗುತ್ತಿರುವ ಆಡಳಿತಕ್ಕಿಂತ ಮತ್ತಷ್ಟು ಅತ್ಯುತ್ತಮ ಆಡಳಿತವನ್ನು ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಂದಡಿಯಿಟ್ಟಿದ್ದಾರೆ.

Advertisement

ಈ ಹಿನ್ನೆಲೆಯಲ್ಲಿ, ಎಲ್ಲ ಸಚಿವಾಲಯ­ಗಳಿಗೆ ಸೂಚನೆ ರವಾನಿಸಿರುವ ಅವರು, ಅವರವರ ಇಲಾಖೆಗಳಲ್ಲಿ ಉತ್ತಮ ಆಡಳಿತ ನೀಡುವ ಉದ್ದೇಶಕ್ಕಾಗಿ ಮೇಲಿನ ಮೂರು ಸಂಪನ್ಮೂಲಗಳನ್ನು ಬಳಕೆ ಮಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖ­ರಾಗುವಂತೆ ಸೂಚಿಸಿದ್ದಾರೆ.

ಇದಕ್ಕಾಗಿಯೇ ಪ್ರಧಾನಿ ನೇತೃತ್ವದಲ್ಲಿ ಇತ್ತೀಚೆಗೆ ಚಿಂತನ ಶಿಬಿರಗಳನ್ನು ನಡೆಸಲಾ­ಯಿತು. ಇವುಗಳಲ್ಲಿ, ಎಲ್ಲ ಇಲಾಖೆಗಳ ಸಚಿವರು, ಹಿರಿಯ ಅಧಿಕಾರಿಗಳು ಪಾಲ್ಗೊ­ಂ­ಡಿ­­ದ್ದರು. ಸುಮಾರು ಐದು ಗಂಟೆಗಳ ಕಾಲ ನಡೆದ ಮೊದಲ ಶಿಬಿರದ ಅನಂತರ 77 ಸಚಿವರನ್ನು ಎಂಟು ತಂಡಗಳನ್ನಾಗಿ ವಿಭಜಿಸಲಾಯಿತು. ಈ ತಂಡಗಳು, ತಂತ್ರ­ಜ್ಞಾನ ಆಧಾರಿತ ಸಂಪನ್ಮೂಲಗಳ ಅಭಿವೃದ್ಧಿ­ಗಾಗಿ ಹಾಗೂ ಯುವ ವೃತ್ತಿಪರರನ್ನು ತಂಡ­ದಲ್ಲಿ ನೇಮಿಸಿಕೊಳ್ಳುವ ಕೆಲಸ ಮಾಡಲಿವೆ. ಈ ಮೂಲಕ, ಆಡಳಿತದಲ್ಲಿ ಹೆಚ್ಚಿನ ಪಾರದ­ರ್ಶಕತೆ, ಚುರುಕುತನ ಹಾಗೂ ಸರಕಾರದ ಫ‌ಲಪ್ರದತೆಯನ್ನು ಹೆಚ್ಚಿಸಲು ನಿರ್ಧರಿಸ­ಲಾಗಿದೆ. ಇದಲ್ಲದೆ 5 ಚಿಂತನ ಶಿಬಿರಗಳನ್ನು ಪ್ರತ್ಯೇಕವಾಗಿ ನಡೆಸಲಾಯಿತು.

“ಪ್ರಾದೇಶಿಕ ಅಗತ್ಯಕ್ಕೆ ಅನುಗುಣವಾಗಿ ನೀತಿ’
ಹೊಸದಿಲ್ಲಿ: ಸದ್ಯ ದೇಶದ ಆಯಾ ಭಾಗಕ್ಕೆ ಅನುಕೂಲವಾಗುವಂತೆ, ಅಗತ್ಯತೆಗೆ ಅನುಗುಣವಾಗಿ ನೀತಿ ನಿಯಮಗಳನ್ನು ಜಾರಿ ಮಾಡಲಾಗುತ್ತಿದೆ. ಹಿಂದಿನ ಸಂದರ್ಭಗಳಲ್ಲಿ ದೇಶಕ್ಕೇ ಅನ್ವಯವಾಗುವಂಥ ನಿಯಮಗಳನ್ನು ದಿಲ್ಲಿಯಲ್ಲಿಯೇ ರೂಪಿಸಲಾಗುತ್ತಿ­ದ್ದು­ದರಿಂದ ಅವುಗಳು ವಿಫ‌ಲ ಹೊಂದುತ್ತಿದ್ದವು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ತ್ರಿಪುರಾದಲ್ಲಿನ 1.47 ಲಕ್ಷ ಫ‌ಲಾನುಭವಿಗಳಿಗೆ ಪ್ರಧಾನಮಂತ್ರಿ ಆವಾಸ್‌ ಯೋಜನೆ- ಗ್ರಾಮೀಣ (ಪಿಎಂಎವೈ-ಜಿ)ದ ಮೊದಲ ಕಂತಿನ ಮನೆಗಳನ್ನು ವಿತರಿಸಿ ಅವರು ಮಾತನಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next