Advertisement

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ

12:07 PM Oct 30, 2017 | |

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಳಗ್ಗೆ ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿ ಬಳಿಕ ಅಲ್ಲಿಂದ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಧರ್ಮಸ್ಥಳಕ್ಕೆ ತೆರಳಿದರು.

Advertisement

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅವರನ್ನು ಕೇಂದ್ರ ಸಚಿವರಾದ ಅನಂತ ಕುಮಾರ್‌, ಡಿ.ವಿ. ಸದಾನಂದ ಗೌಡ, ರಾಜ್ಯ ಸರಕಾರದ ಪರವಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌, ಮಂಗಳೂರು ಮೇಯರ್‌ ಕವಿತಾ ಸನಿಲ್‌ ಅವರು ಸ್ವಾಗತಿಸಿದರು.

ಪ್ರಧಾನಿ ಮೋದಿ ಅವರಿಗೆ ಡಿ.ವಿ. ಸದಾನಂದ ಗೌಡ ಅವರು ಹಾರ ಹಾಕಿ, ಶಾಲು ಹೊದೆಸಿದರೆ, ಅನಂತ್‌ಕುಮಾರ್‌ ಪೇಟ ತೊಡಿಸಿದರು. ಸಚಿವ ಖಾದರ್‌ ಮತ್ತು ಮೇಯರ್‌ ಕವಿತಾ 
ಸನಿಲ್‌ ಅವರು ಕೂಡ ಹೂಗುತ್ಛ ನೀಡಿ ಸ್ವಾಗತಿಸಿದರು.

ರಾಜ್ಯ ಡಿಜಿಪಿ ಆರ್‌.ಕೆ. ದತ್ತಾ ಮತ್ತು ಮೈಸೂರು ಪ್ರಾದೇಶಿಕ ಆಯುಕ್ತರಾದ ಜಯಂತಿ, ಅಪರ ಜಿಲ್ಲಾಧಿಕಾರಿ ಕುಮಾರ್‌, ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌, ಡಿಸಿಪಿ ಹನುಮಂತರಾಯ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಧಾನಿ ಭೇಟಿ ಕಾರ್ಯಕ್ರಮದ ಉಸ್ತುವಾರಿ ಬಿಜೆಪಿ ನಾಯಕರಾದ ಉದಯ ಕುಮಾರ್‌ ಶೆಟ್ಟಿ (ಉಡುಪಿ), ಮಾಜಿ ಶಾಸಕ ಎನ್‌. ಯೋಗೀಶ್‌ ಭಟ್‌, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಮಾಜಿ ವಿಧಾನ ಪರಿಷತ್‌ ಸದಸ್ಯ ಕೆ. ಮೋನಪ್ಪ ಭಂಡಾರಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರು ಉಪಸ್ಥಿತರಿದ್ದರು.

Advertisement

ಸಚಿವರಾದ ಅನಂತ್‌ ಕುಮಾರ್‌ ಮತ್ತು ಡಿ.ವಿ. ಸದಾನಂದ ಗೌಡ ಅವರು ಪ್ರಧಾನಿ ಜತೆ ಹೆಲಿಕಾಪ್ಟರ್‌ನಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸಿದರು. ಧರ್ಮಸ್ಥಳದಿಂದ ಮಂಗಳೂರಿಗೆ ಹಿಂದಿರುಗುವಾಗ ಹೆಲಿಕಾಪ್ಟರ್‌ನಲ್ಲಿ ಪ್ರಧಾನಿ ಜತೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರೂ ಇದ್ದರು.

ಪ್ರಧಾನಿ ಜತೆ ಪ್ರಯಾಣಿಸಿದ
ಡಿಜಿಪಿ ಆರ್‌.ಕೆ. ದತ್ತಾ 

ಡಿಜಿಪಿ ಆರ್‌.ಕೆ. ದತ್ತಾ ಅವರು ಮಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಜತೆ ಧರ್ಮಸ್ಥಳಕ್ಕೆ ತೆರಳಿ ಅವರ ಜತೆಯಲ್ಲೇ ವಾಪಸಾಗಿ ಬಳಿಕ ವಿಮಾನದಲ್ಲಿ ಪ್ರಧಾನಿ ಜತೆಗೆ ಬೆಂಗಳೂರಿಗೆ ತೆರಳಿದರು. 

ಮೇಯರ್‌ಗೆ ಹ್ಯಾಟ್ರಿಕ್‌ ಭಾಗ್ಯ
ಮೇಯರ್‌ ಕವಿತಾ ಸನಿಲ್‌ ಅವರಿಗೆ ತಮ್ಮ ಒಂದು ವರ್ಷದ ಸೇವಾವಧಿಯಲ್ಲಿ ರಾಷ್ಟ್ರ ಮತ್ತು ರಾಜ್ಯದ ಮೂವರು ಗಣ್ಯ ವ್ಯಕ್ತಿಗಳನ್ನು ಸ್ವಾಗತಿಸುವ ಅವಕಾಶ ಲಭಿಸಿದ್ದು, ಈ ಮೂಲಕ ಹ್ಯಾಟ್ರಿಕ್‌ ಭಾಗ್ಯ ತಮ್ಮದಾಗಿಸಿಕೊಂಡಿದ್ದಾರೆ. ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ತಮ್ಮ ಅಧಿಕಾರಾವಧಿಯ ಕೊನೆಯ ದಿನಗಳಲ್ಲಿ ಉಡುಪಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದಾಗ ಅವರನ್ನು ಸ್ವಾಗತಿಸುವ ಭಾಗ್ಯ ಮೇಯರ್‌ ಕವಿತಾ ಸನಿಲ್‌ ಅವರಿಗೆ ಲಭಿಸಿತ್ತು. ಬಳಿಕ ರಾಜ್ಯಪಾಲ ವಜೂಭಾç ರುಡಾಭಾç ವಾಲಾ ಅವರು ಮಂಗಳೂರಿಗೆ ಆಗಮಿಸಿದಾಗ ಮೇಯರ್‌ ಕವಿತಾ ಸನಿಲ್‌ ಸ್ವಾಗತಿಸಿ ಬರಮಾಡಿಕೊಂಡಿದ್ದರು. ಇದೀಗ ರವಿವಾರ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಿದಾಗ ವಿಮಾನ ನಿಲ್ದಾಣದಲ್ಲಿ ಮೇಯರ್‌ ಕವಿತಾ ಸನಿಲ್‌ ಹಾಜರಿದ್ದು, ಮಂಗಳೂರಿನ ಜನರ ಪರವಾಗಿ ಸ್ವಾಗತಿಸಿದರು. ಮೇಯರ್‌ ಅವರನ್ನು ಪ್ರಧಾನಿ ಅವರಿಗೆ ಸಚಿವ ಅನಂತ್‌ ಕುಮಾರ್‌ ಪರಿಚಯಿಸುತ್ತಾ ಕವಿತಾ ಸನಿಲ್‌ ಅವರು ಕರಾಟೆ ಚಾಂಪಿಯನ್‌ ಎಂಬುದಾಗಿ ಗಮನಕ್ಕೆ ತಂದರು. ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ ಮೇಯರ್‌ ಅವರ ಸಾಧನೆ ಬಗ್ಗೆ ಮೆಚ್ಚುಗೆ ಸೂಚಿಸಿ ಅಭಿನಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next