Advertisement

ಪ್ರಧಾನಿ ನರೇಂದ್ರ ಮೋದಿ ನವ ಭಾರತದ ರೂವಾರಿ

02:09 PM Jun 08, 2020 | Suhan S |

ರೋಣ: ಹಲವು ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸಿ ನವಭಾರತ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ. ಅವರ ಈ ಕಾರ್ಯವನ್ನು ಎಲ್ಲರೂ ಬೆಂಬಲಿಸಬೇಕಿದೆ ಎಂದು ಬಿಜೆಪಿ ರೋಣ ಮಂಡಲದ ಅಧ್ಯಕ್ಷ ಮುತ್ತು ಕಡಗದ ಹೇಳಿದರು.

Advertisement

ಅವರು ಪಟ್ಟಣದಲ್ಲಿ ನರೇಂದ್ರ ಮೋದಿ ಸರ್ಕಾರದ ಒಂದು ವರ್ಷದ ಸಾಧನೆಗಳ ಕರ ಪತ್ರಗಳನ್ನು ಮನೆ ಮನೆಗೆ ಹಂಚಿ ಮಾತನಾಡಿದರು. ಬಿಜೆಪಿ ಸರ್ಕಾರ ಮರು ಆಯ್ಕೆಗೊಂಡು ಒಂದು ವರ್ಷ ಗತಿಸುತ್ತ ಬಂದಿದ್ದು, ಪ್ರಧಾನಿ ಮೋದಿ ಸರ್ಕಾರವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಿಸುವಲ್ಲಿ ಶ್ರಮಿಸುತ್ತಿದೆ. ಬಡವರಿಗೆ ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.

ದೇಶದ ಆರ್ಥಿಕ, ಸಾಮಾಜಿಕ, ರಕ್ಷಣಾ ಸೇರಿದಂತೆ ಎಲ್ಲ ರಂಗಗಳಲ್ಲಿ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸಿ ನವಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ಅಲ್ಲದೇ ಕೋವಿಡ್ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರವು ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಲಾಕ್‌ ಡೌನ್‌ ಜಾರಿಗೊಳಿಸಿದೆ. ಅವರ ಸಾಧನೆಯೂ ಪ್ರತಿಯೊಬ್ಬರಿಗೂ ತಲುಪಬೇಕು. ಮೋದಿ ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವಲ್ಲಿ ನಮಗೆ ಹೆಮ್ಮೆಯಾಗುತ್ತದೆ. ದೇಶದ ಅಭಿವೃದ್ಧಿಗಾಗಿ ಜನರು ಮೋದಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದರು.

ಎಪಿಎಂಸಿ ಅಧ್ಯಕ್ಷರಾದ ರಾಜಣ್ಣ ಹೂಲಿ, ಅಶೋಕ ನವಲಗುಂದ, ಬಸವರಾಜ ಕೊಟಗಿ, ಶಿವಾನಂದ ಜಿಡ್ಡಿಬಾಗಿಲ, ವಿಜಯಲಕ್ಷ್ಮೀ ಕೊಟಗಿ, ರೇಣುಕಾ ರಂಗನಗೌಡ್ರ, ಗೋಪಾಲ ಚವ್ಹಾಣ, ರವಿ ದೇಶಣ್ಣವರ, ಮಂಜು ಸಂಗಟಿ ಸೇರಿದಂತೆ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next