Advertisement

ಪ್ರಧಾನಿ ಮೋದಿ ಯಾರ ದುಡ್ಡಲ್ಲಿ ವಿದೇಶ ಪ್ರವಾಸ ಮಾಡ್ತಾರೆ?: CM

11:49 AM Jan 09, 2018 | Sharanya Alva |

ಉಡುಪಿ:ಪ್ರಧಾನಿ ನರೇಂದ್ರ ಮೋದಿ ಅವರು ಯಾರ ದುಡ್ಡಲ್ಲಿ ವಿದೇಶ ಪ್ರವಾಸ ಮಾಡುತ್ತಾರೆ?ಪ್ರಧಾನಿ ಸ್ವಂತ ಹಣದಲ್ಲಿ ವಿಮಾನದಲ್ಲಿ ಓಡಾಡುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Advertisement

ಮಂಗಳವಾರ ಉಡುಪಿಯ ಉಪ್ಪೂರಿನಲ್ಲಿ ಸಾಧನಾ ಸಮಾವೇಶಕ್ಕೆ ಜನರ ಹಣ ಬಳಕೆ ಮಾಡುತ್ತಿರುವುದಾಗಿ ವಿಪಕ್ಷಗಳು ಆರೋಪಿಸುತ್ತಿವೆಯಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ ಅಧಿಕಾರದಲ್ಲಿದ್ದಾಗ ಜನರ ತೆರಿಗೆ ಹಣದಲ್ಲಿಯೇ ಕಾರ್ಯಕ್ರಮಗಳು ನಡೆಯುತ್ತದೆ. ಅದು ಕೇಂದ್ರ ಸರ್ಕಾರ ಕೂಡಾ ಮಾಡುತ್ತದೆ ಎಂದರು.

ನಾನಾ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ ಕಾರ್ಯಕ್ರಮಕ್ಕಾಗಿ ಬೈಂದೂರು, ಉಡುಪಿ, ಕಾಪುಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ರಾತ್ರಿ ಉಪ್ಪೂರಿನಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಅವರ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದರು. ಸಿಎಂ ವಾಸ್ತವ್ಯದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿತ್ತು.

ದೇವೇಗೌಡರದ್ದು ಏನೂ ನಡೆಯಲ್ಲ:

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಆಟ ಏನೂ ನಡೆಯಲ್ಲ. ದೇವೇಗೌಡರನ್ನು ನಾನು ಬಹಳ ವರ್ಷದಿಂದ ನೋಡಿದ್ದೇನೆ. ಗೌಡರ ಜತೆಗಿದ್ದು ನೋಡಿದ್ದೇನೆ, ವಿಪಕ್ಷದಲ್ಲಿದ್ದೂ ನೋಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಏರಲ್ಲ, ಬಿಜೆಪಿ ವರಿಷ್ಠ ಅಮಿತ್ ಶಾಗೆ ಸೋಲಿನ ಭಯ ಶುರುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next