ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಬೇಕೆಂದು ಜನ ಸಾಮಾನ್ಯರ ಪಕ್ಷದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ.
Advertisement
ಸೋಮವಾರ ಜನ ಸಾಮಾನ್ಯರ ಪಕ್ಷದ ಅಧ್ಯಕ್ಷ ಡಾ.ಅಯ್ಯಪ್ಪ ನೇತೃತ್ವದ ನಿಯೋಗ ಪ್ರಧಾನಿ ಕಾರ್ಯಾಲಯಕ್ಕೆ ಮನವಿ ಸಲ್ಲಿಸಿದ್ದು, ಮಹದಾಯಿ ನದಿಗೆ ಸೇರದ ಕಳಸಾ ಮತ್ತು ಬಂಡೂರಿ ನಾಲಾದಿಂದ ಸುಮಾರು ಒಂದೂವರೆ ಟಿಎಂಸಿ ನೀರು ಲಭ್ಯವಾಗುತ್ತಿದೆ. ಅದನ್ನು ಬಳಸಿಕೊಳ್ಳಲು ಕಳಸಾ ಮತ್ತು ಬಂಡೂರಿ ನಾಲಾ ಕಾಮಗಾರಿಯನ್ನು ಜನ ಸಾಮಾನ್ಯರ ಪಕ್ಷದ ವತಿಯಿಂದ ಕರ ಸೇವೆ ಮೂಲಕ ದೇಣಿಗೆ ಸಂಗ್ರಹಿಸಿ ಯೋಜನೆ ಪೂರ್ಣಗೊಳಿಸಲು ಅನುಮತಿ ನೀಡುವಂತೆ ಪ್ರಧಾನಿಗೆ ಮನವಿ ಮಾಡಿದ್ದಾರೆ.