Advertisement

ಕಾಮಗಾರಿ ಅನುಮತಿಗಾಗಿ ಪ್ರಧಾನಿ ಮೋದಿಗೆ ಮನವಿ

06:45 AM Jan 23, 2018 | Team Udayavani |

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಕುರಿತು ನ್ಯಾಯಮಂಡಳಿ ವ್ಯಾಪ್ತಿಯ ಹೊರಗಿರುವ ಪ್ರದೇಶದಲ್ಲಿ
ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಬೇಕೆಂದು ಜನ ಸಾಮಾನ್ಯರ ಪಕ್ಷದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ.

Advertisement

ಸೋಮವಾರ ಜನ ಸಾಮಾನ್ಯರ ಪಕ್ಷದ ಅಧ್ಯಕ್ಷ ಡಾ.ಅಯ್ಯಪ್ಪ ನೇತೃತ್ವದ ನಿಯೋಗ ಪ್ರಧಾನಿ ಕಾರ್ಯಾಲಯಕ್ಕೆ ಮನವಿ ಸಲ್ಲಿಸಿದ್ದು, ಮಹದಾಯಿ ನದಿಗೆ ಸೇರದ ಕಳಸಾ ಮತ್ತು ಬಂಡೂರಿ ನಾಲಾದಿಂದ ಸುಮಾರು ಒಂದೂವರೆ ಟಿಎಂಸಿ ನೀರು ಲಭ್ಯವಾಗುತ್ತಿದೆ. ಅದನ್ನು ಬಳಸಿಕೊಳ್ಳಲು ಕಳಸಾ ಮತ್ತು ಬಂಡೂರಿ ನಾಲಾ ಕಾಮಗಾರಿಯನ್ನು ಜನ ಸಾಮಾನ್ಯರ ಪಕ್ಷದ ವತಿಯಿಂದ ಕರ ಸೇವೆ ಮೂಲಕ ದೇಣಿಗೆ ಸಂಗ್ರಹಿಸಿ ಯೋಜನೆ ಪೂರ್ಣಗೊಳಿಸಲು ಅನುಮತಿ ನೀಡುವಂತೆ ಪ್ರಧಾನಿಗೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next