Advertisement
ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮೇ 3 ರಂದು ಕಲಬುರಗಿಯಿಂದ ಮಧ್ಯಾಹ್ನ 12 ಗಂಟೆಗೆ ಬಳ್ಳಾರಿಗೆ ಆಗಮಿಸಲಿದ್ದು, ನಗರದ ಹೆಲಿಪ್ಯಾಡ್ನಿಂದ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಿ, ಬಹಿರಂಗ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
Related Articles
Advertisement
ಮಾಜಿ ಶಾಸಕ, ನಗರಕ್ಷೇತ್ರದ ಅಭ್ಯರ್ಥಿ ಜಿ. ಸೋಮಶೇಖರರೆಡ್ಡಿ ಮಾತನಾಡಿ, ನಗರದಲ್ಲಿ ಪ್ರಚಾರದ ವೇಳೆ ನಗರಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸುವಂತೆ ಜನರು ಒತ್ತಾಯಿಸಿದ್ದರು. ಪಕ್ಷಕ್ಕೆ ಮತ್ತು ಕಾರ್ಯಕರ್ತರಿಗೆ ಮೋದಿ ದೇವರಾಗಿದ್ದು, ಜನರಿಗೆ ಸೇವಕರಾಗಿದ್ದಾರೆ.
ಜನರು ಬಿಜೆಪಿಯತ್ತ ಹೆಚ್ಚಿನ ಒಲವು ತೋರುತ್ತಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಲಾಡ್ ಹೊಟ್ಟೆ ಕಿಚ್ಚಿನಿಂದ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇದಕ್ಕೆಲ್ಲ ಕಿವಿ ಕೊಡುವುದಿಲ್ಲ. ನಮ್ಮ ವಿರುದ್ಧ ಮಾತನಾಡುತ್ತಿರುವ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಅವರ ಮಾತುಗಳು ಸಹ ಆಶೀರ್ವಾದದ ಸಮಾನ ಎಂದು ತಿಳಿದುಕೊಂಡಿದ್ದೇವೆ ಎಂದರು.
ತೆಲಂಗಾಣದ ಬಿಜೆಪಿ ಪ್ರಧಾನ ಕಾರ್ಯದರ್ಶಿ ದೇವೇಂದ್ರ ರೆಡ್ಡಿ ಮಾತನಾಡಿ, ತೆಲುಗು, ಕನ್ನಡ ಎಂದು ಭಾಷೆಗಳ ಮೇಲೆ ರಾಜಕೀಯ ಮಾಡುತ್ತಿಲ್ಲ. ನಮ್ಮ ಮುಂದೆ ಬರೀ ಬಿಜೆಪಿ, ಕಾಂಗ್ರೆಸ್ ಮಾತ್ರ. ರಾಜ್ಯದಲ್ಲಿ ಭಾಷೆಗಳ ಭೇದಭಾವವಿಲ್ಲ. ಜಿಲ್ಲೆಯಲ್ಲಿ ದಿನೇದಿನೆ ಬಿಜೆಪಿ ಬಲಿಷ್ಠವಾಗುತ್ತಿದ್ದು, 9 ಕ್ಷೇತ್ರಗಳಲ್ಲೂ ನಿಚ್ಚಳ ಬಹುಮತದೊರೆಯುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಸಮರ್ಥಿಸಿಕೊಂಡರು.