Advertisement

ಪ್ರಧಾನಿ ಮೋದಿ ಸುಡಲು ಸಕಾಲ: ಜಯಚಂದ್ರ ವ್ಯಂಗ್ಯ

06:35 AM Nov 10, 2018 | Team Udayavani |

ತುಮಕೂರು: “ನನಗೆ 50 ದಿನ ಕಾಲಾವಕಾಶ ಕೊಡಿ, ದೇಶ ಸರಿ ಹೋಗದಿದ್ದರೆ, ಜೀವಂತವಾಗಿ ಸುಟ್ಟುಬಿಡಿ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ 2 ವರ್ಷ ಕಳೆದರೂ ಅಪನಗದೀಕರಣದಿಂದ ಉಂಟಾಗಿರುವ ವಿವಿಧ ವೈಫ‌ಲ್ಯಗಳನ್ನು ಸರಿಪಡಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಅವರನ್ನು ಸುಡಲು ಇದು ಸಕಾಲ’ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ವ್ಯಂಗ್ಯವಾಡಿದರು.

Advertisement

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಪನಗದೀಕರಣ ಮಾಡಿ 2 ವರ್ಷ ಕಳೆದರೂ ದೇಶದ ಆರ್ಥಿಕತೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ನಡೆಸಿದ ಪ್ರತಿಭಟನೆ ವೇಳೆ ಅವರು ಮಾತನಾಡಿದರು. ಭಯೋತ್ಪಾದನೆ ಈ ಹಿಂದಿಗಿಂತಲೂ ಹೆಚ್ಚಾಗಿದೆ. ಈ ವೈಫ‌ಲ್ಯವನ್ನು ಮುಚ್ಚಿ ಹಾಕಲು ಜನರನ್ನು ತಪ್ಪು ದಾರಿಗೆ ಎಳೆಯುವ ಅನೇಕ ಕೆಲಸಗಳನ್ನು ಬಿಜೆಪಿ ಮಾಡುತ್ತಾ ಬಂದಿದೆ ಎಂದು ಜಯಚಂದ್ರ ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next