Advertisement

ಬೆಂಗಳೂರು:ವಿದ್ಯಾರ್ಥಿಗಳ ಎದುರೇ ಪ್ರಿನ್ಸಿಪಾಲ್‌ ಬರ್ಬರ ಹತ್ಯೆ !

01:04 PM Oct 14, 2018 | |

ಬೆಂಗಳೂರು : ಅಗ್ರಹಾರ ದಾಸರಹಳ್ಳಿಯಲ್ಲಿರುವ ಹಾವನೂರು ಪಬ್ಲಿಕ್‌ ಸ್ಕೂಲ್‌ನಲ್ಲಿ  ವಿದ್ಯಾರ್ಥಿಗಳ ಎದುರೇ ಪ್ರಾಂಶುಪಾಲರನ್ನು ಬರ್ಬರವಾಗಿ ಇರಿದು ಹತ್ಯೆಗೈದ ಬೆಚ್ಚಿ ಬೀಳಿಸುವ ಘಟನೆ ಭಾನುವಾರ ನಡೆದಿದೆ

Advertisement

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸ್ಪೆಷಲ್‌ ಕ್ಲಾಸ್‌ ನಡೆಸುತ್ತಿದ್ದ ವೇಳೆ ಕಾರಿನಲ್ಲಿ ಬಂದು ನಾಲ್ವರು ದುಷ್ಕರ್ಮಿಗಳು ಪ್ರಾಂಶುಪಾಲ ರಂಗನಾಥ ಅವರನ್ನು ಬರ್ಬರವಾಗಿ ಇರಿದು ಪರಾರಿಯಾಗಿದ್ದಾರೆ. ರಂಗನಾಥ್‌ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. 

ಮಾಗಡಿ ರಸ್ತೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next