Advertisement

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಶಾಸಕ ಹಿಟ್ನಾಳ

02:14 PM Jun 20, 2020 | Suhan S |

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

Advertisement

ಹಿರೇಸಿಂದೋಗಿ ಜಿಪಂ ವ್ಯಾಪ್ತಿಯ ಗ್ರಾಮಗಳಾದ ಕಾತರಕಿ-ಗೂಡ್ಲಾನೂರ, ಬಿಸರಳ್ಳಿ, ಬಿಕನಳ್ಳಿ, ಡಂಬ್ರಳ್ಳಿ, ಬೂದಿಹಾಳ, ಬೇಳೂರು ಹಾಗೂ ಮೈನಳ್ಳಿ ಗ್ರಾಮಗಳಲ್ಲಿ 2 ಕೋಟಿ ರೂ. ವೆಚ್ಚದಡಿ ಚೆಕ್‌ ಡ್ಯಾಂ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೇರವೇರಿಸಿ, ಜನಸಂಪರ್ಕ ಸಭೆ ನಡೆಸಿ ಅವರು ಮಾತನಾಡಿದರು.

ಈ ಏಳು ವರ್ಷದ ಅವಧಿಯಲ್ಲಿ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ 3000 ಕೋಟಿಗಿಂತ ಹೆಚ್ಚು ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ. ಕೊಪ್ಪಳ ನಗರಕ್ಕೆ ಜೆ.ಪಿ. ಮಾರ್ಕೆಟ್‌ ನಿರ್ಮಾಣ, ಸುಸಜ್ಜಿತ ತಾಲೂಕು ಕ್ರೀಡಾಂಗಣ, ಮಹಿಳಾ ಪದವಿ ಕಾಲೇಜ್‌ ಕಟ್ಟಡ, ಪಿ.ಜಿ. ಸೆಂಟರ್‌ ಕಟ್ಟಡ ಹಾಗೂ ಕೊಪ್ಪಳ ನಗರಕ್ಕೆ ಒಂದು ಹೈಟೆಕ್‌ ಮಲ್ಟಿಸ್ಪೇಷಲ್‌ ಆಸ್ಪತ್ರೆ ಸೇರಿ ಹಲವು ಅಭಿವೃದ್ಧಿ ಕಾರ್ಯ ನಡೆದಿವೆ ಎಂದರು.

ಜಿಪಂ ಮಾಜಿ ಅಧ್ಯಕ್ಷ ಎಸ್‌.ಬಿ. ನಾಗರಳ್ಳಿ, ತಾಪಂ ಅಧ್ಯಕ್ಷ ಬಾಲಚಂದ್ರನ್‌, ಎಪಿಎಂಸಿ ಅಧ್ಯಕ್ಷ ನಾಗರಾಜ ಚಳ್ಳೂಳ್ಳಿ, ಕೆಎಂಎಫ್‌ ಮಾಜಿ ಅಧ್ಯಕ್ಷ ವೆಂಕನಗೌಡ್ರ ಹಿರೇಗೌಡ್ರ, ತಾಪಂ ಸದಸ್ಯ ವೀರುಪಾಕ್ಷಪ್ಪ ಬಿಸರಳ್ಳಿ, ನಗರಸಭಾ ಸದಸ್ಯ ಅಕ್ಬರ ಪಾಷ ಪಲ್ಟನ್‌ ಇನ್ನಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next