Advertisement

Forest:ಆನೆ ಕ್ಯಾಂಪ್‌ ನಿರ್ಮಾಣಕ್ಕೆ ಆದ್ಯತೆ: ಅರಣ್ಯ ಸಚಿವ ಈಶ್ವರ್‌ ಖಂಡ್ರೆ

11:35 PM Feb 13, 2024 | Pranav MS |

ಬೆಂಗಳೂರು: ಆನೆಗಳ ದಾಳಿ ಹಿಮ್ಮೆಟ್ಟಿಸುವ ಸಂಬಂಧ ಸರಕಾರ ಕ್ರಮ ಕೈಗೊಂಡಿದ್ದು ರೈಲ್ವೇ ಬ್ಯಾರಿಕೇಡ್‌ ನಿರ್ಮಾಣದ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆಯಿರಿಸಿದೆ. ಜತೆಗೆ ಆನೆ ಕ್ಯಾಂಪ್‌ ನಿರ್ಮಾಣಕ್ಕೂ ಮುಂದಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ವಿಧಾನಪರಿಷತ್‌ನಲ್ಲಿ ಹೇಳಿದರು.

Advertisement

ರಾಮನಗರ ಭಾಗದಲ್ಲಿ ಆನೆದಾಳಿ ತಡೆಗಟ್ಟುವ ಸಂಬಂಧ ನಿಯಮ 33ರ ಅಡಿಯಲ್ಲಿ ಕಾಂಗ್ರೆಸ್‌ ಸದಸ್ಯ ಎಸ್‌.ರವಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ವನ್ಯಜೀವಿ ತಜ್ಞರ ವರದಿ ಕೇಳಲಾಗಿದೆ. ರಾಜ್ಯದಲ್ಲಿ 6,395 ಆನೆಗಳಿದ್ದು ಈ ವರ್ಷ 55 ಮಂದಿ ವನ್ಯಜೀವಿ ದಾಳಿಯಿಂದ ಸಾವನ್ನಪ್ಪಿದ್ದು ಸರಕಾರ ಕೂಡ ಅದಕ್ಕೆ ಪರಿಹಾರ ನೀಡಿದೆ. ಆನೆ ದಾಳಿ ತಡೆಗಟ್ಟಲು ಕಂದಕ, ಸೋಲಾರ್‌ ಬೇಲಿ ಮತ್ತು ರೈಲ್ವೇ ಬ್ಯಾರಿಕೇಡ್‌ ನಿರ್ಮಾಣ ಮಾಡುವ ಕಾರ್ಯ ನಡೆದಿದೆ. ರೈಲ್ವೇ ಬ್ಯಾರಿಕೇಡ್‌ ಒಂದೇ ಆನೆ ದಾಳಿ ತಡಗಟ್ಟಲು ಶಾಶ್ವತ ಪರಿಹಾರ ಎಂದು ಆಲೋಚಿಸಲಾಗಿದ್ದು, ಆ ಹಿನ್ನೆಲೆಯಲ್ಲಿ ಈ ಸಾಲಿನ ಬಜೆಟ್‌ನಲ್ಲಿ 100 ಕೋಟಿ.ರೂ. ಹೆಚ್ಚುವರಿಯಾಗಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಹೊಸದಾಗಿ 120 ರೈಲ್ವೆ ಬ್ಯಾರಿಕೇಡ್‌ ನಿರ್ಮಾಣಕ್ಕೆ ಮುಂಜೂರಾತಿ ನೀಡಲಾಗಿದ್ದು 186 ಕೋಟಿ ರೂ. ವೆಚ್ಚದಲ್ಲಿ ರೈಲ್ವೇ ಬ್ಯಾರಿಕೇಡ್‌ ನಿರ್ಮಾಣ ಕಾರ್ಯ ನಡೆದಿದೆ. ರೈಲ್ವೇ ಬ್ಯಾರಿಕೇಡ್‌ ನಿರ್ಮಾಣದಲ್ಲಿ ವಿಳಂಬವಾಗಿದೆ ಎಂದು ಆರೋಪ ಕೇಳಿಬಂದಿದೆ. ಆದರೆ ಗುತ್ತಿಗೆದಾರರು ರೈಲ್ವೇ ಇಲಾಖೆಯ ಮೂಲಕ ಬ್ಯಾರಿಕೇಡ್‌ಗಳನ್ನು ಖರೀದಿಸಬೇಕಾಗಿರುವ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಈ ಕಾರ್ಯಕ್ಕೆ ಚುರುಕು ಮುಟ್ಟಿನಸುವ ಕೆಲಸ ಆಗಲಿದೆ ಎಂದರು.

18.70 ಕಿ.ಮೀ ರೈಲ್ವೆ ಬ್ಯಾರಿಕೇಡ್‌:
ರಾಮನಗರ ಮತ್ತು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಭಾಗದಲ್ಲಿ ಆನೆಗಳ ದಾಳಿಯನ್ನು ಹಿಮೆಟ್ಟಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಆನೆ ಕಾರ್ಯ ಪಡೆ ರಚಿಸಲಾಗಿದೆ. ಆನೆ ಪಡೆಯ ಕಂಟ್ರೋಲ್‌ ರೂಮ್‌ ಮೂಲಕ ಕಾಡಂಚಿನ ಗ್ರಾಮಗಳ ಗ್ರಾಮಸ್ಥರ ಮೊಬೈಲ್‌ ದೂರವಾಣಿ ಸಂಖ್ಯೆಯನ್ನು ನೋಂದಣಿ ಮಾಡಿ ಎಸ್‌ಎಂಎಸ್‌ ಮೂಲಕ ಕಾಡಾನೆಗಳ ಚಲನವಲನದ ಮೇಲೆ ಅರಣ್ಯಾಧಿಕಾರಿಗಳು ಕಣ್ಣಿಟ್ಟಿದ್ದಾರೆ ಎಂದು ಹೇಳಿದರು. ಕಾಡಾನೆಗಳು ರೈತರ ಜಮೀನಿಗೆ ಬರದಂತೆ ತಡೆಯಲು ಅರಣ್ಯ ಪ್ರದೇಶದ ಗಡಿಗಳಲ್ಲಿ 4 ಆನೆ ಹಿಮ್ಮೆಟ್ಟಿಸುವ ತಂಡ, 8 ಕಳ್ಳಬೇಟೆ ತಡೆ ಶಿಬಿರ, 2 ಆನೆ ಕಾರ್ಯಪಡೆ ತಂಡಗಳು ಹಾಗೂ ಇಲಾಖೆಯ ಸಿಬ್ಬಂದಿಗಳು ಹಗಲುರಾತ್ರಿ ಪಹರೆ ಮಾಡುತ್ತಾರೆ ಎಂದು ತಿಳಿಸಿದರು.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾವನದಲ್ಲಿ 2023-24ರ ಅವಧಿಯಲ್ಲಿ 18.70 ಕಿ.ಮೀ ರೈಲ್ವೆ ಬ್ಯಾರಿಕೇಡ್‌, ರಾಮನಗರ ವಿಭಾಗ ವ್ಯಾಪ್ತಿಯಲ್ಲಿ 4 ಕಿ.ಮೀ, ಕಾವೇರಿ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿ 17 ಕಿಲೋ ಮೀಟರ್‌ ರೈಲ್ವೆ ಬ್ಯಾರೀಕೆಡ್‌ ನಿರ್ಮಾಣ ಮಾಡಲಾಗಿದೆ. ಜತೆಗೆ ಈಗಾಗಲೇ ಆನೆ ಕ್ಯಾಂಪ್‌ ನಿರ್ಮಾಣಕ್ಕೂ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next