Advertisement

ಸಂತ್ರಸ್ತರ ರಕ್ಷಣೆ, ಪರಿಹಾರ, ಪುನರ್ವಸತಿಗೆ ಆದ್ಯತೆ

11:07 PM Oct 30, 2019 | Team Udayavani |

ಬೆಂಗಳೂರು: ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯವಾಕ್ಯದೊಂದಿಗೆ ಆಡಳಿತ ಆರಂಭಿಸಿದ ನಮಗೆ, ಅತ್ಯಧಿಕ ಮಳೆ, ಪ್ರವಾಹ ಪರಿಸ್ಥಿತಿ ಉಂಟಾಯಿತು. ವಾಡಿಕೆಗಿಂತ ಶೇ.279ರಷ್ಟು ಹೆಚ್ಚು ಮಳೆಯಾಗಿದೆ. ನೆರೆ ಜತೆಗೆ ಬರ ನಿರ್ವಹಣೆಯ ಸವಾಲನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ. ಕೇಂದ್ರದಿಂದ ಎರಡನೇ ಕಂತಿನ ಪರಿಹಾರ 15 ದಿನದಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಬಿಎಸ್‌ವೈ ಹೇಳಿದರು.

Advertisement

ರಾಜ್ಯದ 22 ಜಿಲ್ಲೆಗಳ 103 ತಾಲೂಕುಗಳು ನೆರೆಪೀಡಿತವಾಗಿದ್ದು, ಐದು ಜಿಲ್ಲೆಗಳಲ್ಲಿ ಬರವಿದೆ. 18 ಜಿಲ್ಲೆಗಳ 49 ತಾಲೂಕುಗಳು ಬರಪೀಡಿತವಾಗಿವೆ. ಸಂತ್ರಸ್ತರಿಗೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯಡಿ ನಿತ್ಯ ಬಳಕೆ ವಸ್ತು ಖರೀದಿಗೆ 3,800 ರೂ.ಪರಿಹಾರ ನಿಗದಿಪಡಿಸಿದ್ದರೆ, 6,200 ರೂ.ಗಳನ್ನು ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದೆ. ಬೆಳೆ ಹಾನಿಗೆ ಎನ್‌ಡಿಆರ್‌ಎಫ್ ನಿಗದಿಪಡಿಸಿದ ಪರಿಹಾರಕ್ಕಿಂತ ಪ್ರತಿ ಹೆಕ್ಟೇರ್‌ಗೆ 10,000 ರೂ.ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.

15 ದಿನದಲ್ಲಿ ಎರಡನೇ ಕಂತಿನ ಪರಿಹಾರ: ಕೇಂದ್ರ ಸರ್ಕಾರ ಈಗಾಗಲೇ 1,200 ಕೋಟಿ ರೂ.ಮಧ್ಯಂತರ ಪರಿಹಾರ ನೀಡಿದೆ. ರಾಜ್ಯ ಸರ್ಕಾರದಿಂದ 2,949 ಕೋಟಿ ರೂ. ಬಿಡುಗಡೆಯಾಗಿದೆ. ರಸ್ತೆ ದುರಸ್ತಿಗೆಂದು 1,000 ಕೋಟಿ ರೂ., ಮನೆಗಳ ನಿರ್ಮಾಣಕ್ಕೆ 500 ಕೋಟಿ ರೂ.ಬಿಡುಗಡೆ ಮಾಡಲಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿದ್ದು, ಪರಿಹಾರ ಕಾರ್ಯಕ್ಕೆ ಹಣದ ಕೊರತೆ ಇಲ್ಲ. ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ 1,027 ಕೊಟಿ ರೂ.ಗಳಿವೆ ಎಂದು ಹೇಳಿದರು. ನೀತಿ ಆಯೋಗದ ವರದಿಯಂತೆ ಆವಿಷ್ಕಾರ ಸೂಚ್ಯಂಕದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ನಿರುದ್ಯೋಗ ಪ್ರಮಾಣದಲ್ಲಿ ರಾಷ್ಟ್ರೀಯ ಸರಾಸರಿ ಶೇ.8.4ರಷ್ಟಿದ್ದರೆ ರಾಜ್ಯದಲ್ಲಿ ಈ ಪ್ರಮಾಣ ಶೇ.0.7ರಷ್ಟಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next