Advertisement

ಬಾಕಿ ಕಡತಗಳ ಶೀಘ್ರ ವಿಲೇವಾರಿಗೆ ಆದ್ಯತೆ;ಉಡಾ ಅಧ್ಯಕ್ಷರಾಗಿ ಮನೋಹರ ಕಲ್ಮಾಡಿ ಅಧಿಕಾರ ಸ್ವೀಕಾರ

02:33 AM Mar 15, 2022 | Team Udayavani |

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ (ಉಡಾ) ನೂತನ ಅಧ್ಯಕ್ಷರಾಗಿ ಮನೋಹರ ಕಲ್ಮಾಡಿ ಸೋಮವಾರ ಅಧಿಕಾರ ಸ್ವೀಕರಿಸಿದರು.

Advertisement

ಆದಿ ಉಡುಪಿ ಪ್ರಾಧಿಕಾರ ಕಚೇರಿಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಅಧಿಕಾರ ಹಸ್ತಾಂತರಿಸಿದರು.

ಅನಂತರ ಮಾತನಾಡಿದ ಮನೋ ಹರ ಕಲ್ಮಾ ಡಿ ಅವರು, ಪ್ರಾಧಿಕಾರದಲ್ಲಿ ಬಾಕಿ ಇರುವ ಕಡತಗಳನ್ನು ಪರಿಶೀಲಿಸಿ ಶೀಘ್ರ ವಿಲೇವಾರಿ ಮಾಡ ಲಾಗುವುದು. ಎಲ್ಲರ ಸಹಕಾರದಿಂದ ನಗರದ ಅಭಿವೃದ್ಧಿ ಮತ್ತು ಜನರಿಗೆ ಸಮಸ್ಯೆ ಯಾಗದ ರೀತಿಯಲ್ಲಿ ಕಾರ್ಯ ನಿರ್ವಹಿಸಿಕೊಂಡು ಹೋಗುವು ದಾಗಿ ತಿಳಿಸಿದರು.

ಶಾಸಕ ಕೆ. ರಘುಪತಿ ಭಟ್‌ ಮಾತನಾಡಿ, ಪ್ರಾಧಿಕಾರದ ಪ್ರತಿಷ್ಠೆಹೆಚ್ಚಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೆಲಸಗಳು ನಡೆಯಬೇಕಿದೆ ಎಂದು ಶುಭ ಹಾರೈಸಿದರು.

ಪ್ರಾಧಿಕಾರದ ನೂತನ ಸದಸ್ಯರಾದ ಪ್ರವೀಣ್‌ ಕುಮಾರ್‌ ಶೆಟ್ಟಿ ಕಪ್ಪೆಟ್ಟು, ಕಿಶೋರ್‌ ಕುಮಾರ್‌, ಸುಮಾ ನಾಯ್ಕ, ಮಾಲತಿ ಸುಧಾಕರ್‌, ಯೋಗೀಶ್‌ ಚಂದ್ರ ಉಪಸ್ಥಿತರಿದ್ದರು.

Advertisement

ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ರಾಘವೇಂದ್ರ ಕಿಣಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌, ಪೌರಾಯುಕ್ತ ಡಾ| ಉದಯ ಕುಮಾರ್‌ ಶೆಟ್ಟಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಮೀನುಗಾರಿಕೆ ಫೆಡರೇಶನ್‌ ಅಧ್ಯಕ್ಷ ಯಶಪಾಲ್‌ ಎ. ಸುವರ್ಣ, ನಗರ ಬಿಜೆಪಿ ಅಧ್ಯಕ್ಷ ಮಹೇಶ್‌ ಠಾಕೂರ್‌, ಉಡುಪಿ ಚೇಂಬರ್‌ ಆಫ್ ಕಾಮರ್ಸ್‌ ಅಧ್ಯಕ್ಷ ಅಂಡಾರು ದೇವಿ ಪ್ರಸಾದ್‌ ಶೆಟ್ಟಿ, ನಗರಸಭೆ ಸದಸ್ಯರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next