Advertisement

Caste,Politics ರಹಿತ ಬಲಿಷ್ಠ ದೇಶ ಕಟ್ಟಲು ಸಹಕಾರಿ ರಂಗ ಆದ್ಯತೆ ನೀಡಬೇಕು:ಸಿದ್ದರಾಮಯ್ಯ

03:40 PM Nov 20, 2023 | Team Udayavani |

ವಿಜಯಪುರ: ಸಹಕಾರಿ ರಂಗ ಜಾತಿ, ಧರ್ಮ, ಮತ ರಹಿತವಾದ ವ್ಯವಸ್ಥೆ. ಸಹಕಾರಿ ರಂಗ ಬಲವರ್ಧನೆ ಇರುವ ದೇಶ, ರಾಜ್ಯಗಳ ಆರ್ಥಿಕ ಉತ್ಪನ್ನ (ಜಿಡಿಪಿ) ಬೆಳವಣಿಗೆಗೆ ಸಹಕಾರಿ ಕ್ಷೇತ್ರದ ಕೊಡುಗೆಯೇ ಪ್ರಧಾನ ಎಂಬುದು ಗಮನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಸೋಮವಾರ ನಗರದಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ‌ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಹಕಾರಿ ರಂಗದಲ್ಲಿ ಇರುವ ಧುರಿಣರು ದೇಶವನ್ನು ಜಾತಿ, ಮತ, ಪಂಥ, ರಾಜಕೀಯ ರಹಿತವಾಗಿ ಸಹಕಾರಿ ರಂಗವನ್ನು ಬಲವರ್ಧನೆ ಮಾಡುವ ಮೂಲಕ ಸಮಾಹ, ದೇಶವನ್ನು ಕಟ್ಟುವಲ್ಲಿ ಶ್ರಮಿಸಬೇಕು ಎಂದರು.

ಕಳೆದ ಒಂದು ವಾರದಿಂದ ದೇಶದಲ್ಲಿ ನಡೆದ ಸಹಕಾರಿ ಸಪ್ತಾಹ ವಿಜಯಪುರ ಜಿಲ್ಲೆಯಲ್ಲಿ ಸಮಾರೋಪ ಗೊಂಡಿದ್ದು, ಈ ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಪಾಲ್ಗೊಂಡಿದ್ದೇನೆ ಎಂದರು.

ಸ್ವಾತಂತ್ರ್ಯ ಪೂರ್ವದಿಂದಲೇ ದೇಶದಲ್ಲಿ ಕರ್ನಾಟಕದ ಗದಗ ಜಿಲ್ಲೆಯ ಕಣಗುನಹಾಳ ಗ್ರಾಮದಲ್ಲಿ 1905 ರಲ್ಲಿ ಸಿದ್ದನಗೌಡ ಪಾಟೀಲ ಅವರಿಂದ ಸಹಕಾರಿ ವ್ಯವಸ್ಥೆ ಜನ್ಮ ತಳೆದಿದೆ. ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಸಹಕಾರಿ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಸ್ಮರಣೆಗಾಗಿ ನೆಹರು ಅವರ ಜನ್ಮದಿನವಾದ ನವೆಂಬರ್ 14 ರಿಂದ ರಾಷ್ಟ್ರ ಮಟ್ಟದಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಆಚರಿಸಲಾಗುತ್ತದೆ ಎಂದರು.

ಇದೀಗ ಸಹಕಾರಿ ರಂಗ ಭಾರತದಲ್ಲಿ ಹೆಮ್ಮರವಾಗಿ ಬೆಳೆದಿದ್ದು, 8.5 ಲಕ್ಷ ಸಂಘಗಳಿವೆ ಎಂದರು.

Advertisement

ಸಹಕಾರಿ ರಂಗದಲ್ಲಿ ದಲಿತ ಸಮುದಾಯದ ಮಹಿಳೆಯರು ಸದಸ್ಯತ್ವ ಪಡೆಯಲು ಮುಂದಾಗಬೇಕು ಎಂದು ಕರೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಲು ಉತ್ಪಾದಕ ವ್ಯವಸ್ಥೆ ಬಲವರ್ಧನೆಗೆ ಸರ್ಕಾರ ನೆರವಿಗೆ ನಿಂತಿದೆ. ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಗಾಗಿ ಸರ್ಕಾರ ವಾರ್ಷಿಕ 1200 ಕೋಟಿ ರೂ.‌ ನೆರವು ನೀಡುವ ಮೂಲಕ ಹಾಲು ಉತ್ಪಾದಕರ ಸಂಘಗಳ ಶಕ್ತಿ ತುಂಬುವ ಕೆಲಸ ಮಾಡಿದೆ ಎಂದರು.

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನೀಡುವ ಸಾಲದಲ್ಲಿ ನಬಾರ್ಡ ತನ್ನ ಪಾಲಿನ ಹಣ ನೀಡುವ ವಿಷಯದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಈ ವಿಷಯವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತೇನೆ. ವೇದಿಕೆ ಮೇಲಿರುವ ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ ಅವರು ಕೂಡ ನಬಾರ್ಡ ನೆರವಿಗೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

ಕೃಷಿ ಕ್ಷೇತ್ರಕ್ಕೆ ಬಡ್ಡಿ ರಹಿತ, ಕಡಿಮೆ ಬಡ್ಡಿ ದರಕ್ಕೆ ಜಾತಿನೀಡುವುದರಿಂದ ರೈತರ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದರು.

ಕರ್ನಾಟ ಸೇರಿದಂತೆ ದೇಶದಲ್ಲಿ 12 ರಾಜ್ಯಗಳ ಭೀಕರ ಬರಗಾಲ ಆವರಿಸಿದೆ. ರಾಜ್ಯದಲ್ಲಿ ಆವರಿಸಿರುವ ಬರ ಪರಿಸ್ಥಿತಿ ನಿರ್ವಹಣೆಗೆ 800 ಕೋಟಿ ಹಣವನ್ನು ಜಿಲ್ಲಾಧಿಕಾರಿಗಳ ಖಾತೆಗೆ ಜಮೆ ಮಾಡಿದೆ. ರಾಜ್ಯ ಸರ್ಕಾರ ಬರ ಪರಿಸ್ಥಿತಿ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇದಕ್ಕಾಗಿ ಬರ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.

ಸಮಾರೋಪ ಸಮಾರಂಭ ಆಯೋಜಿರುವ ಆತಿಥ್ಯ ವಹಿಸಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜವಳಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು.

ಸಚಿವರಾದ ಕೆ.ಎನ್.ರಾಜಣ್ಣ, ಎಂ.ಬಿ.ಪಾಟೀಲ, ಆರ್.ಬಿ. ತಿಮ್ಮಾಪುರ, ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ, ಸಹಕಾರಿ ರಂಗದ ಹಿರಿಯ ನಾಯಕ ಜಿ.ಟಿ. ದೇವೇಗೌಡ, ವಿಜಯಪುರ, ಬಾಗಲಕೋಟ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳ ಶಾಸಕರು, ಸಹಕಾರಿ ರಂಗದ ಸಾಧಕರು ವೇದಿಕೆ ಮೇಲಿದ್ದರು.

ಚಿತ್ರ ಕಲಾವಿದನಿಗೆ ಸನ್ಮಾನ
ತಮ್ಮ ಮುಂದೆಯೇವ ತಮ್ಮ ಭಾವಚಿತ್ರ ಬಿಡಿಸಿದ ಕೆಂಚಪ್ಪ ಬಡಿಗೇರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ನನ್ನ ಚಿತ್ರವನ್ನು ಚನ್ನಾಗಿ ಬಿಡಿಸಿದ್ದಿ ಕಣಯ್ಯ ಎಂದು ಶಾಲು ಹೊದಿಸಿ ಸನ್ಮಾನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next