Advertisement

ಬೆಂಗಳೂರು ಅಭಿವೃದ್ಧಿಗೆ ಆದ್ಯತೆ: ಪರಮೇಶ್ವರ್‌

12:35 PM Aug 30, 2018 | |

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸೌಂದರ್ಯ ಹೆಚ್ಚಿಸಲು ಅಕ್ರಮ ಕೇಬಲ್‌ ಅಳವಡಿಕೆಗೆ ತಡೆಯೊಡ್ಡಲಾಗಿದೆ.

Advertisement

ಸುಮಾರು 8 ಸಾವಿರ ಕಿಲೋ ಮೀಟರ್‌ನಷ್ಟು  ಅಕ್ರಮ ಕೇಬಲ್‌ ತೆಗೆದು ಹಾಕಲಾಗಿದೆ. ಅಲ್ಲದೇ, ಅಕ್ರಮವಾಗಿ ಕೇಬಲ್‌ ಹಾಕಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಹೇಳಿದರು.

ನಗರದಲ್ಲಿ ಫ್ಲೆಕ್ಸ್‌ ಹಾಗೂ ಬ್ಯಾನರ್‌ಗಳನ್ನು ತೆಗೆದು ಹಾಕಲಾಗಿದ್ದು, ಹೀಗಾಗಿ ನಗರದ ರಸ್ತೆಗಳು ಅಂದವಾಗಿ ಕಾಣಿಸುತ್ತಿವೆ. ನಗರದ ಟ್ರಾಫಿಕ್‌ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು 13 ಸಾವಿರ ಕೋಟಿ ವೆಚ್ಚದಲ್ಲಿ ಫೆರಿಪೆರಲ್‌ ರಿಂಗ್‌ ರಸ್ತೆ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ.

ಭೂ ಸ್ವಾಧೀನ ಪಡಿಸಿಕೊಳ್ಳಲು 8 ಸಾವಿರ ಕೋಟಿ ಹಾಗೂ ರಸ್ತೆ ನಿರ್ಮಾಣಕ್ಕೆ 5 ಸಾವಿರ ಕೋಟಿ ಹಣ ಮೀಸಲಿಡಲಾಗಿದೆ. ನಗರದಲ್ಲಿ ಎರಡು ಎಲಿವೇಟೆಡ್‌ ಕಾರಿಡಾರ್‌ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಇದೇ ವೇಳೆ, ಶೀಘ್ರವೇ ಕೆಂಪೇಗೌಡ ಬಡಾವಣೆಯ ಅರ್ಜಿದಾರರಿಗೆ ಲಾಟರಿ ಮೂಲಕ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next