Advertisement

ಅಫ್ರಿದಿ ಭಾರತ ವಿರೋಧಿ ಹೇಳಿಕೆಗೆ ಕೊಹ್ಲಿ ತಿರುಗೇಟು

07:10 AM Apr 05, 2018 | Team Udayavani |

ಬೆಂಗಳೂರು: ಕಾಶ್ಮೀರದಲ್ಲಿ ಭಾರತ ನಡೆಸುತ್ತಿರುವ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯನ್ನು ಟೀಕಿಸಿದ್ದ ಪಾಕ್‌ ಮಾಜಿ ಕ್ರಿಕೆಟಿಗ ಶಾಹಿದ್‌ ಅಫ್ರಿದಿಗೆ ಭಾರತ ಕ್ರಿಕೆಟ್‌ ನಾಯಕ ವಿರಾಟ್‌ ಕೊಹ್ಲಿ ತಿರುಗೇಟು ನೀಡಿದ್ದಾರೆ. 

Advertisement

ಯಾವುದೇ ಕಾರಣಕ್ಕೂ ದೇಶದ ಹಿತಾಸಕ್ತಿಯೊಂದಿಗೆ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾನು ಯಾವಾಗಲೂ ದೇಶದ ಜೊತೆ ನಿಲ್ಲುತ್ತೇನೆ. ಅದರ ವಿರುದ್ಧವಾದ ಯಾವುದನ್ನೂ ಬೆಂಬಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಆದರೆ ಇಂತಹ ಪ್ರಕರಣದಲ್ಲಿ ಪ್ರತಿಕ್ರಿಯೆ ನೀಡುವುದು ವೈಯಕ್ತಿಕ ಆಯ್ಕೆ. ಒಂದು ವಿಷಯದ ಬಗ್ಗೆ ಪೂರ್ಣ ಜ್ಞಾನವಿಲ್ಲದೇ ಇಂತಹ ಚರ್ಚೆಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದೂ ಕೊಹ್ಲಿ ಸೇರಿಸಿದ್ದಾರೆ.

ಅಫ್ರಿದಿ ಹೇಳಿದ್ದೇನು?: ಕಾಶ್ಮೀರದಲ್ಲಿ ರಕ್ತಪಾತ ನಡೆಯುತ್ತಿದೆ. ಅಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ವಿಶ್ವ ಸಂಸ್ಥೆ ಕೂಡಲೇ ಮಧ್ಯಪ್ರವೇಶಿಸಿ ಅಲ್ಲಿಗೆ ತನಿಖಾ ತಂಡ ಕಳುಹಿಸಬೇಕು ಎಂದು ಅಫ್ರಿದಿ ಹೇಳಿದ್ದರು. ಇದನ್ನು ಕ್ರಿಕೆಟಿಗರಾದ ಗೌತಮ್‌ ಗಂಭೀರ್‌, ಕಪಿಲ್‌ ದೇವ್‌ ಬಲವಾಗಿ ಟೀಕಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next